Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2024 ರಲ್ಲಿ BSNL ಗೆ 18 ದಶಲಕ್ಷ ಗ್ರಾಹಕರಿಂದ ಗುಡ್ ಬೈ!

ನವದೆಹಲಿ04: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸೇವೆ ಪೂರೈಕೆದಾರ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) 18 ದಶಲಕ್ಷದಷ್ಟು ಗ್ರಾಹಕರನ್ನು ಕಳೆದುಕೊಂಡಿದೆ.

ಈಗ BSNL ಗ್ರಾಹಕರ ಸಂಖ್ಯೆ 88.06 ಮಿಲಿಯನ್ ಗೆ ಇಳಿಕೆಯಾಗಿದೆ. ಭಾರತದ ಟೆಲಿಕಾಮ್ ನಿಯಂತ್ರಕ ಪ್ರಾಧಿಕಾರ(ಟ್ರಾಯ್) ನ ಮಾಹಿತಿಯ ಪ್ರಕಾರ, ಸಂಸ್ಥೆ 2024 ರ ಮಾರ್ಚ್ ತಿಂಗಳ ಒಂದರಲ್ಲೇ 2.3 ಮಿಲಿಯನ್ ಗ್ರಾಹಕರನ್ನು ಕಳೆದುಕೊಂಡಿದೆ. ಗ್ರಾಹಕರ ಸಂಖ್ಯೆ ಇಳಿಕೆಯಾಗುತ್ತಿರುವುದನ್ನು ತಡೆಗಟ್ಟಲು ಸಾಧ್ಯವಾಗದೇ ಇರುವ ಸಂಸ್ಥೆಗಳ ಪೈಕಿ ವೊಡಾಫೋನ್ ನಂತರದ ಸ್ಥಾನದಲ್ಲಿ ಬಿಎಸ್ಎನ್ಎಲ್ ಇದೆ.

ಉದ್ಯಮದ ತಜ್ಞರ ಪ್ರಕಾರ ಈ ಕುಸಿತಕ್ಕೆ ನೆಟ್‌ವರ್ಕ್ ಅಪ್‌ಗ್ರೇಡ್‌ಗಳಲ್ಲಿನ ಹೂಡಿಕೆಯ ಕೊರತೆ ಕಾರಣವಾಗಿದೆ. BSNL ತನ್ನ ಗ್ರಾಹಕರಿಗೆ ತನ್ನ ಹೈ-ಸ್ಪೀಡ್ 4G ಮತ್ತು 5G ನೆಟ್‌ವರ್ಕ್‌ಗಳನ್ನು ಇನ್ನೂ ಹೊರತಂದಿಲ್ಲ. ವೊಡಾಫೋನ್ ಸಂಸ್ಥೆ ಮಾರ್ಚ್ ತಿಂಗಳಲ್ಲಿ 0.68 ದಶಲಕ್ಷ ಗ್ರಾಹಕರನ್ನು ಕಳೆದುಕೊಂಡಿದೆ. ಮತ್ತೊಂದೆಡೆ, ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಕ್ರಮವಾಗಿ 2.14 ಮಿಲಿಯನ್ ಮತ್ತು 1.76 ಮಿಲಿಯನ್ ಹೊಸ ಗ್ರಾಹಕರೊಂದಿಗೆ ಗ್ರಾಹಕರನ್ನು ಗಳಿಸಿವೆ.




BSNL ನ ಮಾರುಕಟ್ಟೆ ಪಾಲು ಮಾರ್ಚ್ 2024 ವೇಳೆಗೆ 7.57% ಕ್ಕೆ ಇಳಿದಿದೆ, ಆದರೆ ಅದರ ಪ್ರತಿಸ್ಪರ್ಧಿಗಳು, ಖಾಸಗಿ ಟೆಲಿಕಾಂ ಸೇವಾ ಪೂರೈಕೆದಾರರು ಮಾರುಕಟ್ಟೆ ಪಾಲನ್ನು ಹೆಚ್ಚಿಸಿಕೊಂಡಿದ್ದಾರೆ. TRAI ಪ್ರಕಾರ, ರಿಲಯನ್ಸ್ ಜಿಯೋ ದೇಶದಲ್ಲಿ 40.30% ನೊಂದಿಗೆ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ನಂತರದ ಸ್ಥಾನದಲ್ಲಿ ಭಾರ್ತಿ ಏರ್‌ಟೆಲ್ 33.10% ಮತ್ತು ವೊಡಾಫೋನ್ ಐಡಿಯಾ 18.86% ಟೆಲಿಕಾಂ ಮಾರುಕಟ್ಟೆ ಪಾಲನ್ನು ಹೊಂದಿದೆ.








ವರ್ಷದುದ್ದಕ್ಕೂ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆಗೆ ತನ್ನ ಚಂದಾದಾರರ ನಷ್ಟವನ್ನು ತಡೆಯಲು ಸಾಧ್ಯವಾಗಲಿಲ್ಲ. ಏಪ್ರಿಲ್ 2023 ರಲ್ಲಿ, BSNL ತನ್ನ ನೆಟ್‌ವರ್ಕ್ ನ್ನು ತೊರೆದ 2.99 ಮಿಲಿಯನ್ ಚಂದಾದಾರರೊಂದಿಗೆ, ಮೇ 2023 ರಲ್ಲಿ 2.81 ಮಿಲಿಯನ್ ನಷ್ಟು ಗ್ರಾಹಕರ ನಷ್ಟವನ್ನು ಅನುಭವಿಸಿದೆ ಎಂದು TRAI ಡೇಟಾ ಬಹಿರಂಗಪಡಿಸಿದೆ.

 



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ