Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಟಿ ಪರೀಕ್ಷೆ ಗೊಂದಲ ಬಗ್ಗೆ ತಜ್ಞರ ಸಮಿತಿ ವರದಿ ಸಲ್ಲಿಕೆ: ಶೀಘ್ರವೇ ಸರ್ಕಾರದ ನಿರ್ಧಾರ

ಬೆಂಗಳೂರು, ಏಪ್ರಿಲ್ 27: ಸಿಇಟಿ ಪರೀಕ್ಷೆ  ಗೊಂದಲ ಪರಿಶೀಲನೆಗೆ ನಾಲ್ವರು ಸದಸ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ಸರ್ಕಾರ ಇತ್ತೀಚೆಗೆ ರಚಿಸಿತ್ತು. ಇದೀಗ ತಜ್ಞರ ಸಮಿತಿ ಸಿಇಟಿ ಪರೀಕ್ಷೆ ಗೊಂದಲ ಕುರಿತಾಗಿ ವರದಿ ಸಲ್ಲಿಸಿದೆ. ವರದಿ ಆಧರಿಸಿ ಮುಂದಿನ ವಾರ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಿಇಟಿ ಸಂಬಂಧ ಆಕ್ಷೇಪ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳ ಆಕ್ಷೇಪ ಹಿನ್ನೆಲೆ ತಜ್ಞರ ವರದಿ ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.

ಏಪ್ರಿಲ್‌ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಮಾಡಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಈ ಗೊಂದಲ ಪರಿಶೀಲನೆಗೆ ಸರ್ಕಾರ ನಾಲ್ವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತ್ತು.

ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಬೆಂಗಳೂರಿನಲ್ಲಿಯೇ 167 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. 737 ವೀಕ್ಷಕರು, 737 ವಿಶೇಷ ಜಾಗೃತ ದಳದ ಸದಸ್ಯರು 737 ಪ್ರಶ್ನೆಪತ್ರಿಕಾ ಪಾಲಕರು, 14568 ಕೊಠಡಿ ಮೇಲ್ವಿಚಾರಕರು 20300 ಅಧಿಕಾರಿ ವರ್ಗದವರ ನಿಯೋಜನೆ ಮಾಡಲಾಗಿತ್ತು. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ನಡೆದಿತ್ತು.

ಈ ವರ್ಷ 3,49637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು.

ಇನ್ನು ಸಾಮಾನ್ಯವಾಗಿ ಪ್ರತಿ ವರ್ಷ ಪರೀಕ್ಷೆ ವೇಳೆ ಮೂರು ಸೆಟ್​ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲಾಗುತ್ತದೆ. ಅದೇ ರೀತಿ 2023ನೇ ಸಾಲಿನಲ್ಲಿ ತಯಾರಿಸಿದ್ದ ಯಾವುದೋ ಒಂದು ಸೆಟ್​ ಪ್ರಶ್ನೆ ಪತ್ರಿಕೆಯನ್ನೇ ಈ ಬಾರಿಯ ಪರೀಕ್ಷೆಗೂ ಪ್ರಾಧಿಕಾರ ನೀಡಿತ್ತು ಎಂಬ ಅನುಮಾನ ಕೂಡ ಮೂಡಿತ್ತು. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಡುವೆ ಉಂಟಾದ ಸಂವಹನ ಕೊರತೆಯೂ ಒಂದು ಕಾರಣವಾಗಿದೆ ಎನ್ನಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ