ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ದೂರುದಾರರೂ ಆಗಿರುವ ಸ್ನೇಹಮಯಿ ಕೃಷ್ಣ, ನಿವೃತ್ತ ಶಿಕ್ಷಕ ಶಾಂತಪ್ಪರಿಂದ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಇದೀಗ ಕ್ರಮ ಕೈಗೊಂಡಿರುವ ಸರ್ಕಾರ, 3 ದಿನದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಮುಡಾ 50:50 ಹಗರಣದಲ್ಲಿ ನಿಯಮಬಾಹಿರವಾಗಿ ಸೈಟ್ಹಂಚಿಕೆ ವಿಚಾರವಾಗಿ ಮುಡಾದ ಮಾಜಿ ಆಯುಕ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕೆ.ಲತಾ ಆದೇಶಿಸಿದ್ದಾರೆ. ಈ ಸಂಬಂಧ ಜ.10 ರಂದೇ ಮುಡಾದ ಆಯುಕ್ತ ರಘುನಂದನ್ ಅವರಿಗೆ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ.