Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನೌಕರರ ಸಂಬಳ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು,

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, NWKRTC ಮತ್ತು KKRTC ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಿಸುವ ಮೂಲಕ ಗುಡ್ ನ್ಯೂಸ್ ನೀಡಿದೆ.

2025ರ ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಮಾಡಲಾಗಿದೆ. ಈ ಹೊಸ ಆದೇಶದ ಪ್ರಕಾರ, ಮಾರ್ಚ್ 31, 2025ರ ಅಂತ್ಯಕ್ಕೆ ನೌಕರರು ಪಡೆಯುತ್ತಿದ್ದ ಮೂಲ ವೇತನಕ್ಕೆ ಈ ಹೆಚ್ಚಳ ಅನ್ವಯವಾಗಲಿದ್ದು, ಪರಿಷ್ಕೃತ ವೇತನ ಶ್ರೇಣಿಯು ಮಾರ್ಚ್ 31, 2029ರವರೆಗೆ ಜಾರಿಯಲ್ಲಿರಲಿದೆ.

15 ತಿಂಗಳ ಹಿಂಬಾಕಿ ನೀಡಲು ನಿರ್ಧಾರ;

ಹೆಚ್ಚಳ ವೇತನದ ಹಣವು ಜುಲೈ 1, 2026ರಿಂದ ನೌಕರರ ಮಾಸಿಕ ಸಂಬಳದೊಂದಿಗೆ ಪಾವತಿಯಾಗಲಿದೆ. ಇನ್ನು ಏಪ್ರಿಲ್ 1, 2025 ರಿಂದ ಜೂನ್ 30, 2026 ರ ವರೆಗಿನ 15 ತಿಂಗಳ ಹಿಂಬಾಕಿಯನ್ನು ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪಾವತಿಸಲು ಸರ್ಕಾರ ತೀರ್ಮಾನಿಸಿದೆ.

ಹೆಚ್ಚುವರಿ ವೆಚ್ಚ ಎಷ್ಟು?

ಈ ವೇತನ ಪರಿಷ್ಕರಣೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು 72.80 ಕೋಟಿ ರೂ ಮತ್ತು ವಾರ್ಷಿಕ 873.64 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ. ಈ ಪರಿಷ್ಕರಣೆ ಒಟ್ಟು 1 ಲಕ್ಷದ 5 ಸಾವಿರ ಸಿಬ್ಬಂದಿಗಳಿಗೆ ಅನ್ವಯವಾಗಲಿದೆ.

ಹಿಂಬಾಕಿ ವೇತನ ಜಮೆ;

ಈಗಾಗಲೇ 2023ರ ಮಾರ್ಚ್ ವೇತನ ಪರಿಷ್ಕರಣೆಯ 26 ತಿಂಗಳ ಹಿಂಬಾಕಿ ಮೊತ್ತ 1,271.92 ಕೋಟಿ ರೂ ಇದ್ದು, ಮೊದಲ ಕಂತಿನ 450 ಕೋಟಿ ರೂ ಸರ್ಕಾರ ಬಿಡುಗಡೆ ಮಾಡಿದ್ದು, ನೌಕರರ ಖಾತೆಗಳಿಗೆ ಜಮಾ ಮಾಡಲಾಗಿದೆ.

ಕೆಎಸ್ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ನೌಕರರು ಶೇ.25ರಷ್ಟು ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದರು. ರಾಜ್ಯಾದ್ಯಂತ ಮುಷ್ಕರ ಮಾಡಲಾಗಿತ್ತು. ಈ ಹಿಂದೆ ಬಿಜೆಪಿ ಸರ್ಕಾರ 2023 ಮಾರ್ಚ್​​ 15ರಂದು ಶೇ.15ರಷ್ಟು ವೇತನ ಹೆಚ್ಚಿಸಿತ್ತು. ನೌಕರರ ಬೇಡಿಕೆ ಶೇ.25 ಇದ್ದರೂ, ಸದ್ಯ ಶೇ.12.50 ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ