Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಉಗ್ರವಾದಿಗಳನ್ನು ಖಂಡಿಸದೆ ದೇಶದ ಅಭಿಮಾನ ಮರೆತಿದೆ:ಸಿದ್ದನಗೌಡರ

ಬೈಲಹೊಂಗಲ: ಐತಿಹಾಸಿಕ ದೆಹಲಿ ಕೆಂಪುಕೊಟೆ ಹತ್ತಿರ ಬಯೊತ್ಪಾಕ ಕೃತ್ಯದಲ್ಲಿ ನಡೆದ ಸ್ಫೋಟವನ್ನು ಇಡೀ ದೇಶವೆ ಖಂಡಿಸುತ್ತಿದೆ. ಆದರೆ, ನಮ್ಮ ರಾಜ್ಯದ ಕೆಲ ಆಕಸ್ಮಿಕವಾಗಿ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಉಗ್ರರನ್ನ ಖಂಡಿಸುವದನ್ನು ಬಿಟ್ಟು ಪ್ರಧಾನಿ ಮತ್ತು ಗೃಹಸಚಿವರನ್ನ ಟೀಕೆ ಮಾಡುವದರೊಂದಿಗೆ ರಾಜಕೀಯ ಬಣ್ಣ ಬಳಿಯಲು ಹೊರಟಿರುವದು ನಾಚಿಕೆಗೆಡಿತನ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್‌ಎಸ್.ಸಿದ್ದನಗೌಡರ ಹೇಳಿದ್ದಾರೆ.


 ಬುಧವಾರ ಪತ್ರಿಕಾ ಪ್ರಕಟನೆ ನೀಡಿದ ಅವರು, ಯಾವ ಭಯೋತ್ಪಾದಕತೆ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರನ್ನು ಬಲಿ ಪಡೆಯಿತೋ, ಅಂಥ ಭಯೋತ್ಪಾದಕತೆಯನ್ನು ಖಂಡಿಸುವ ಗಟ್ಟಿತನ ತೊರದ ಕಾಂಗ್ರೆಸ್ ಪಕ್ಷದ ನಾಯಕರ ನಡೆ ಖಂಡನೀಯ. ಭಯೋತ್ಪಾದಕ ಕೃತ್ಯ ನಡೆದಾಗಲೆಲ್ಲಾ ಕಾಂಗ್ರೆಸ್ ಪಕ್ಷವು ಮೃದು ಧೋರಣೆ ತೋರಿಸುತ್ತದೆ.


 ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಘಟನೆಯನ್ನು ಚುನಾವಣೆಗಳೊಂದಿಗೆ ಜೋಡಣೆ ಮಾಡಿ ಮಾತನಾಡಿರುವುದು ಶಾಸಕ ಈಶ್ವರ ಪ್ರದೀಪ್ ರಾಷ್ಟ್ರೀಯ ಭದ್ರತಾ ಪಡೆಗಳ ಗುಪ್ತದಳವನ್ನೆ ಟಿಕಿಸುವದು ಇವರ ಬಾಯಚಪಲಾವಾಗಿದೆ. ವೈಟ್ ಕಾಲರ್ ಉಗ್ರವಾದದಲ್ಲಿ ತೊಡಗಿರುವ ಕೆಲವರು ಮಾಡಬಾರದ್ದನ್ನು ಮಾಡುವಂಥ ಕೃತ್ಯಕ್ಕೆ ಕೈ ಹಾಕಿದವರನ್ನು ಮಟ್ಟಾಹಾಕಲು ಕೇಂದ್ರದ ಪಡೆಗಳು ಕಾರ್ಯೊನ್ಮಖವಾಗಿವೆ. ಉಗ್ರರ ಕೃತ್ಯವನ್ನು ತಪ್ಪಿಸಲು ನಮ್ಮ ಎನ್‍ಐಎ ತಕ್ಷಣವೇ ಇಂತವರನ್ನು ಪತ್ತೆಹಚ್ಚಿ ಬಂಧಿಸಿದ್ದು, ಇದು ಭಾರತದ ತಾಕತ್ತು ಎಂದರು.


ಎನ್‍ಐಎ ತಂಡವು ಆರೋಪಿಗಳನ್ನು ಬಂಧಿಸಿರುವುದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಸ್ವತಂತ್ರತೆಯೆ ಕಾರಣ. ಕಾಂಗ್ರೆಸ್ ಭಯೋತ್ಪಾದನೆ ಕೃತ್ಯಗಳಲ್ಲಿ  ತನ್ನ ನೀತಿಗಳನ್ನು ಬದಲಿಸಿಕೊಳ್ಳದೇ ಇದ್ದಲ್ಲಿ ಅಧಃಪತನ ಖಚಿತ ಎಂದು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ