Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾದವಾಡ ಗ್ರಾಮದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ" : ಕಲ್ಮೇಶ ಗಾಣಿಗಿ

ಮೂಡಲಗಿ :  ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ  ಕನ್ನಡ ರಾಜ್ಯೋತ್ಸವವನ್ನು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ನಮ್ಮ ಕರವೇ ಜಿಲ್ಲಾ ಸಂಚಾಲಕ ಕಲ್ಮೇಶ ಗಾಣಿಗಿ ಹೇಳಿದರು.

ಬುಧವಾರದಂದು ಪಟ್ಟಣದ ತಾಲೂಕಾ ಪ್ರಾದೇಶಿಕ ಪತ್ರಕರ್ತ ಸಂಘದ ಕಚೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ.1 ರಂದು ಬೆಳಿಗ್ಗೆ 9 ಘಂಟೆಗೆ ಪೇಟೆ ಆವರಣದಲ್ಲಿ ಧ್ವಜಾರೋಹನ ನೆರವೇರಿಸುವುದರ ಮೂಲಕ ಕಾರ್ಯಕ್ರಮ ಚಾಲನೆಗೊಂಡು, ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಕನ್ನಡಾಭಿಮಾನಿಗಳು ಹಾಗೂ ನಮ್ಮ ಕರವೇ ಕಾರ್ಯಕರ್ತರು, ಸೇರಿ ಸಕಲ  ವಾದ್ಯಮೇಳಗಳೊಂದಿಗೆ  ದೇಶ ಕಂಡ ಮಹಾನ್ ವ್ಯಕ್ತಿಗಳ ಛದ್ಮವೇಶದೊಂದಿಗೆ ಮೆರವಣಿಗೆ ಹೊರಟು ಶ್ರೀ ಬಸವೇಶ್ವರ ವೃತ್ತದಲ್ಲಿರುವ ಧ್ವಜಸ್ಥಂಭಕ್ಕೆ ಧ್ವಜಾರೋಹಣ ನೆರವೇರಿಸುವುದರ ಮೂಲಕ ಶ್ರೀ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಶ್ರೀ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು ಎಂದರು.

ಯಾದವಾಡ ಘಟಕದ ನಮ್ಮ ಕರವೇ ಅಧ್ಯಕ್ಷರಾದ ಅಜಯ್ ಜಾಧವ ಮಾತನಾಡಿ, ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾದ ಖ್ಯಾತ ಯೂಟೂಬ್ ಕಲಾವಿದರಾದ ಖುಷಿ ಬೆಳಗಾವಿ, ಸುಧಾರಾಣಿ ಮುಧೋಳ, ಭೃಂಗೇಶ್ ಹಂಗರಗಿ ತಂಡದವರು  ಭಾಗವಹಿಸುವರು. ಪ್ರತಿ ವರ್ಷ ರಾಜ್ಯೋತ್ಸವದ ಅಂಗವಾಗಿ ಅದ್ಧೂರಿ ವೇದಿಕೆ ಕಾರ್ಯಕ್ರಮ ಜರುಗುತ್ತಿತ್ತು, ಆದರೆ ಈ ವರ್ಷ ನ.2 ರಂದು ದೀಪಾವಳಿ ಹಬ್ಬ ಹಾಗೂ ನ.6 ರಿಂದ ನ.23 ರವರೆಗೆ ಕಾರಣಾಂತರಗಳಿಂದ ತೆರವುಗೊಂಡಿದ್ದ ಸ್ಥಾನಗಳಿಗೆ ಸ್ಥಳೀಯ ಉಪಚುನಾವಣೆ ಘೋಷಣೆ ಆಗಿರುವ ಕಾರಣ ಈ ವರ್ಷದ ವೇದಿಕೆ ಕಾರ್ಯಕ್ರಮವನ್ನು ನವೆಂಬರ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಕರವೇ ಯುವ ಘಟಕದ ಅಧ್ಯಕ್ಷರಾದ ಮಾಲೀಕಜಾನ್ ಜಾರೆ ಹಾಗೂ ಯುವ ಘಟಕದ ಪದಾಧಿಕಾರಿಗಳಾದ ವೆಂಕಟೇಶ್ ಇಟ್ಟಣ್ಣವರ್ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ