Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ - ಶಾಸಕ ಗುಡಗುಂಟಿ

ಜಮಖಂಡಿ;ನಗರದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು 4-5 ತಿಂಗಳಲ್ಲಿ ಎಲ್ಲ ಪ್ರಮುಖ ರಸ್ತೆಗಳ ಅಭಿವೃದ್ಧಿ ಯಾಗಲಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ಸೋಮವಾರ ಸಂಜೆ ನಗರದ ಮೊರೆ ಪ್ಲಾಟ್‌ನಲ್ಲಿ ನಗರೋತ್ಥಾನ ಹಂತ 4 ಯೊಜನೆಅಡಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಸರ್ಕಾರ ದಿಂದ 25 ಕೋಟಿರೂ.ಗಳ ಅನುದಾನ ಬಿಡುಗಡೆಯಾಗಿದ್ದು ಲೋಕೋಪಯೋಗಿ ಇಲಾಖೆ, ನಗರಸಭೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಮಾನವಾಗಿ ಅನುದಾನ ನೀಡಲಾಗಿದೆ ಇದರಿಂದ ನಗರದ ಪ್ರಮುಖ ರಸ್ತೆಗಳು, ಗ್ರಾಮಾಂತರ ಪ್ರದೇಶದ ಸಾವಳಗಿ, ಗೋಠೆ, ತೊದಲಬಾಗಿ ಮುಂತಾದ ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಸುಮಾರು ಐದು ತಿಂಗಳು ಗಳ ಅವಧಿಯಲ್ಲಿ ಎಲ್ಲ ರಸ್ತೆಗಳು ಅಭಿವೃದ್ಧಿಯಾಗಲಿವೆ ಎಂದು ತಿಳಿಸಿದರು. ಜಮಖಂಡಿ ನಗರ ವೇಗವಾಗಿ ಬೆಳೆಯುತ್ತಿದ್ದು, ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳು ಆಗಬೇಕಿದೆ ಅದಕ್ಕಾಗಿ ಸಂಬಂಧ ಪಟ್ಟ ಇಲಾಖೆಯ ಸಚಿವರಿಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದು ತಿಳಿಸಿದರು.

ನಗರೋತ್ಥಾನ ಹಂತ 4 ಯೊಜನೆಅಡಿ ವಾರ್ಡ ನಂ.31 ಹುಡ್ಕೊಕಾಲನಿಯಲ್ಲಿ ಡಾಂಬರ ರಸ್ತೆ ನಿರ್ಮಾಣ, ಅಂಗವಿಕಲ ಸ್ನೇಹಿ ಉದ್ಯಾನವನ ಅಭಿವೃದ್ಧಿ, ವಾರ್ಡ 30ರ ಟೀಚರ್ಸ್ ಕಾಲನಿಯ ಉದ್ಯಾನವನ ಅಭಿವೃದ್ಧಿ, ವಾರ್ಡ 1 ಉದ್ಯಾನವನ ಅಭಿವೃದ್ಧಿ, ವಾರ್ಡ 3 ರ ಸಮುದಾಯ ಭವನಕ್ಕೆ ಕಬ್ಬಿಣದ ಮೆಲ್ಛಾವಣಿ ನಿರ್ಮಾಣ, ವಾರ್ಡ, 7 ಕತಾಟೆ ಬಡಾವಣೆಯಲ್ಲಿ ಅಂಗವಿಕಲ ಸ್ನೇಹಿ ಉದ್ಯಾನವನ ಅಭಿವೃದ್ಧಿ, ನಗರದ ದೇಸಾಯಿವೃತ್ತ ದಿಂದ ದೀಪದ ರಸ್ತೆಯ ಮಧ್ಯದಲ್ಲಿ ಅಲಂಕಾರಿಕ ವಿದ್ಯುತ್‌ದೀಪ ಅಳವಡಿಕೆ, ವಾರ್ಡ 15 ರಲ್ಲಿ ಭಕ್ತಕನಕದಾಸ ಸಮುದಾಯ ಭವನದ ಎದುರಿನ ರಸ್ತೆಗೆ ಫೇವರ್ಸ ಅಳವಡಿಸುವ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಸುಮಾರು 275.25 ಲಕ್ಷ ರೂಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಈಶ್ವರ ವಾಳೆಣ್ಣವರ, ಪೌರಾಯುಕ್ತ ಜ್ಯೋತಿಗಿರೀಶ, ನಗರಸಭೆ ಸದಸ್ಯ ಕುಶಾಲ ವಾಘಮೋರೆ, ಮುಖಂಡರಾದ ಅಜಯ ಕಡಪಟ್ಟಿ ರಾಜಾಸಾಬ ಕಡಕೋಳ, ಶ್ರೀಧರ ಕಂಬಿ, ವಿನಾಯಕ ಪವಾರ, ರಾಜು ತಳಗಿಹಾಳ, ರಾಜು ಚಿಕನಾಳ, ಪರಶುರಾಮ ವಾಳೆಣ್ಣವರ, ಮೋಹನ ಇಂಗಳೆ, ನಾನಾ ಮೊರೆ, ಮುಂತಾದವರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ