Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಕೆಂಭಾವಿಯಲ್ಲಿ ಷರತ್ತುಬದ್ಧ ಆರ್​ಎಸ್​ಎಸ್​ ಪಥಸಂಚಲನಕ್ಕೆ ಗ್ರೀನ್​ ಸಿಗ್ನಲ್

ಯಾದಗಿರಿ:  ಕೆಂಭಾವಿ ಪಟ್ಟಣದ ಪುರಸಭೆ ಮುಂಭಾಗದಿಂದ ಆರಂಭವಾಗಿ, ಪಟ್ಟಣದ ಪ್ರಮುಖ ಬೀಡಿಗಳಲ್ಲಿ ಸಂಚರಿಸುವ ಈ ಪಥಸಂಚಲನವು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಂದರ್ಭದ ಭಾಗವಾಗಿದೆ. ಆದರೆ ಈ ಅನುಮತಿಯು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಷರತ್ತುಗಳೊಂದಿಗೆ ನೀಡಲಾಗಿದೆ  ಆರ್ಎಸ್ಎಸ್​ ಪಥಸಂಚಲನ ಮಂಗಳವಾರ ಬೆಳಿಗ್ಗೆ 9:30ಕ್ಕೆ ಕೆಂಭಾವಿ ಪುರಸಭೆ ಮುಂಭಾಗದಿಂದ ಆರಂಭವಾಗಿ, ಪಟ್ಟಣದ ಮುಖ್ಯ ಬೀಡಿಗಳಾದ ರೈಲ್ವೇ ಸ್ಟೇಷನ್ ರಸ್ತೆ, ಮಾರುಕಟ್ಟೆ ಬೀಡಿ ಮತ್ತು ಗ್ರಾಮ ಪಂಚಾಯಿತಿ ಬಳಿಯವರೆಗೆ ಸಂಚರಿಸುತ್ತದೆ. ಸುಮಾರು 500 ಸ್ವಯಂಸೇವಕರು ಭಾಗವಹಿಸಲಿದ್ದಾರೆ ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ. ಇದು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಮಾರಂಭದ ಭಾಗವಾಗಿದ್ದು, ರಾಜ್ಯದಾದ್ಯಂತ ಇಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೂ ಹಿಂದಿನ ಘಟನೆಗಳಲ್ಲಿ ಇಂತಹ ಮಾರ್ಚ್‌ಗಳು ವಿವಾದಕ್ಕೆ ಕಾರಣವಾಗಿವೆ, ಆದ್ದರಿಂದ ಜಿಲ್ಲಾಡಳಿತವು ಎಚ್ಚರಿಕೆಯಿಂದ ನಿರ್ಧರಿಸಿದೆ.

ಇನ್ನೂ  ಆರ್ಎಸ್ಎಸ್​​ ಪಥಸಂಚಲನಕ್ಕೆ ಅನುಮತಿಯ ಷರತ್ತುಗಳು ಕಟ್ಟುನಿಟ್ಟಾಗಿವೆ. ಮೊದಲು, ಪಥಸಂಚಲನದಲ್ಲಿ ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಉಂಟಾದರೆ, ಸಂಘಟನೆಯ ಮುಖಂಡರು ಸಂಪೂರ್ಣ ಖರ್ಚು ಭರಿಸಬೇಕು. ಎರಡನೇ, ಪೊಲೀಸ್ ಇಲಾಖೆ ನಿಗದಿಪಡಿಸಿದ ಮಾರ್ಗದಲ್ಲಿಯೇ ಸಂಚಲನ ನಡೆಸಬೇಕು. ಸಂಘಟನೆಯವರು ಪೊಲೀಸ್ ಭದ್ರತೆಯನ್ನು ಸ್ವೀಕರಿಸಬೇಕು. ಮೂರನೇ, ಯಾವುದೇ ಜಾತಿ, ಧರ್ಮ ಅಥವಾ ಸಮುದಾಯಕ್ಕೆ ನೋವುಂಟು ಮಾಡುವ ಘೋಷಣೆಗಳು ಅಥವಾ ಕೂಗುಗಳು ಇರಬಾರದು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ