Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಕೆಂಭಾವಿಯಲ್ಲಿ ಷರತ್ತುಬದ್ಧ ಆರ್​ಎಸ್​ಎಸ್​ ಪಥಸಂಚಲನಕ್ಕೆ ಗ್ರೀನ್​ ಸಿಗ್ನಲ್

ಯಾದಗಿರಿ:  ಕೆಂಭಾವಿ ಪಟ್ಟಣದ ಪುರಸಭೆ ಮುಂಭಾಗದಿಂದ ಆರಂಭವಾಗಿ, ಪಟ್ಟಣದ ಪ್ರಮುಖ ಬೀಡಿಗಳಲ್ಲಿ ಸಂಚರಿಸುವ ಈ ಪಥಸಂಚಲನವು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಂದರ್ಭದ ಭಾಗವಾಗಿದೆ. ಆದರೆ ಈ ಅನುಮತಿಯು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಷರತ್ತುಗಳೊಂದಿಗೆ ನೀಡಲಾಗಿದೆ  ಆರ್ಎಸ್ಎಸ್​ ಪಥಸಂಚಲನ ಮಂಗಳವಾರ ಬೆಳಿಗ್ಗೆ 9:30ಕ್ಕೆ ಕೆಂಭಾವಿ ಪುರಸಭೆ ಮುಂಭಾಗದಿಂದ ಆರಂಭವಾಗಿ, ಪಟ್ಟಣದ ಮುಖ್ಯ ಬೀಡಿಗಳಾದ ರೈಲ್ವೇ ಸ್ಟೇಷನ್ ರಸ್ತೆ, ಮಾರುಕಟ್ಟೆ ಬೀಡಿ ಮತ್ತು ಗ್ರಾಮ ಪಂಚಾಯಿತಿ ಬಳಿಯವರೆಗೆ ಸಂಚರಿಸುತ್ತದೆ. ಸುಮಾರು 500 ಸ್ವಯಂಸೇವಕರು ಭಾಗವಹಿಸಲಿದ್ದಾರೆ ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ. ಇದು ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಮಾರಂಭದ ಭಾಗವಾಗಿದ್ದು, ರಾಜ್ಯದಾದ್ಯಂತ ಇಂತಹ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೂ ಹಿಂದಿನ ಘಟನೆಗಳಲ್ಲಿ ಇಂತಹ ಮಾರ್ಚ್‌ಗಳು ವಿವಾದಕ್ಕೆ ಕಾರಣವಾಗಿವೆ, ಆದ್ದರಿಂದ ಜಿಲ್ಲಾಡಳಿತವು ಎಚ್ಚರಿಕೆಯಿಂದ ನಿರ್ಧರಿಸಿದೆ.

ಇನ್ನೂ  ಆರ್ಎಸ್ಎಸ್​​ ಪಥಸಂಚಲನಕ್ಕೆ ಅನುಮತಿಯ ಷರತ್ತುಗಳು ಕಟ್ಟುನಿಟ್ಟಾಗಿವೆ. ಮೊದಲು, ಪಥಸಂಚಲನದಲ್ಲಿ ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಉಂಟಾದರೆ, ಸಂಘಟನೆಯ ಮುಖಂಡರು ಸಂಪೂರ್ಣ ಖರ್ಚು ಭರಿಸಬೇಕು. ಎರಡನೇ, ಪೊಲೀಸ್ ಇಲಾಖೆ ನಿಗದಿಪಡಿಸಿದ ಮಾರ್ಗದಲ್ಲಿಯೇ ಸಂಚಲನ ನಡೆಸಬೇಕು. ಸಂಘಟನೆಯವರು ಪೊಲೀಸ್ ಭದ್ರತೆಯನ್ನು ಸ್ವೀಕರಿಸಬೇಕು. ಮೂರನೇ, ಯಾವುದೇ ಜಾತಿ, ಧರ್ಮ ಅಥವಾ ಸಮುದಾಯಕ್ಕೆ ನೋವುಂಟು ಮಾಡುವ ಘೋಷಣೆಗಳು ಅಥವಾ ಕೂಗುಗಳು ಇರಬಾರದು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*