Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ  ಡಿಜಿಟಲ್ ಮಾರ್ಕೆಟಿಂಗ್ ಆಪ್: ಹೆಸರು ನೋಂದಣಿಗೆ ಆಹ್ವಾನ

ಬಳ್ಳಾರಿ,ಫೆ.12 -ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಮಹಿಳಾ ಉದ್ದಿಮೆದಾರರನ್ನು ನೋಂದಾಯಿಸಲು ಗೃಹಲಕ್ಷ್ಮಿಯ ಡಿಜಿಟಲ್ ಮಾರ್ಕೆಟಿಂಗ್ ಆಪ್ ರೂಪಿಸಿದ್ದು, ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಆಭಿವೃದ್ಧಿಗೊಳಿಸಲು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಮಹಿಳಾ ಉದ್ಯಮಿದಾರರನ್ನಾಗಿ ಮಾಡಲು ಹಾಗೂ ಮಹಿಳೆಯರು ಉತ್ಪಾದಿಸುವ ಹಾಗೂ ತಯಾರಿಸುವ ವಿವಿಧ ವಸ್ತುಗಳಿಗೆ ಉಚಿತ ಮಾರುಕಟ್ಟೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಗೃಹಲಕ್ಷಿö್ಮ ಡಿಜಿಟಲ್ ವೇದಿಕೆಯ ಸೌಲಭ್ಯದಲ್ಲಿ ಕಲ್ಪಿಸಲಾಗಿದ್ದು, ಇದರ ಪೂರಕಗಾಗಿ ಗೃಹಲಕ್ಷಿö್ಮ ಡಿಜಿಟಲ್ ಮಾರ್ಕೆಟಿಂಗ್ ಆಪ್ ಅನ್ನು ಲಾಂಚ್ ಮಾಡಲಾಗಿದೆ. ಹಾಗಾಗಿ ಅರ್ಹ ಮಹಿಳಾ ಉದ್ಯಮಿಗಳು ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹರು: ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು, ಎನ್‌ಆರ್‌ಎಲ್‌ಎಂ ಫಲಾನುಭವಿಗಳು ಹಾಗೂ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ-ಘಟಕಗಳ ಮಹಿಳಾ ಉದ್ಯಮಿಗಳು, ರುಡ್‌ಸೆಟ್ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಮಹಿಳೆಯರು ಅರ್ಹರಾಗಿರುತ್ತಾರೆ.
ನಿಗಮದಿಂದ ಹಾಗೂ ಸರ್ಕಾರದ ವಿವಿಧ ನಿಗಮ ಮಂಡಳಿ ಮತ್ತು ಇಲಾಖೆಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ನಗರದ ಎಸ್.ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ