Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸೆಂಬರ್​ 21ಕ್ಕೆ ಜೈಸಲ್ಮೇರ್​ನಲ್ಲಿ ಜಿಎಸ್​ಟಿ ಮಂಡಳಿ ಸಭೆ

ನವದೆಹಲಿ: ಜಿಎಸ್​ಟಿ ಮಂಡಳಿಯು ಇದೇ ಡಿಸೆಂಬರ್​ 21ರಂದು ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಸಭೆ ಸೇರಲಿದ್ದು, ಇಲ್ಲಿ ಬಹು ನಿರೀಕ್ಷಿತ ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್​ಟಿ ವಿನಾಯಿತಿ ಕುರಿತು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.


ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅಧ್ಯಕ್ಷತೆಯಲ್ಲಿ ರಾಜ್ಯದ ಇತರೆ ಅಧಿಕಾರಿಗಳು ಮಂಡಳಿಯಲ್ಲಿರಲಿದ್ದಾರೆ. ರಾಜ್ಯ ಸಚಿವರ ಸಮಿತಿ ಶಿಫಾರಸ್ಸಿನ ಅನ್ವಯ ತೆರಿಗೆ ದರ ಕಡಿತ ಮತ್ತು ಸಾಮಾನ್ಯ ವಸ್ತುಗಳ ಮೇಲೆ ಶೇ 12ರಿಂದ 5ರಷ್ಟು ಸ್ಲಾಬ್​ ಇಳಿಕೆ ಕುರಿತು ನಿರ್ಧಾರ ನಡೆಸುವ ಸಾಧ್ಯತೆ ಇದೆ.


ಈ ಸಂಬಂಧ ಪೋಸ್ಟ್​ ಮಾಡಿರುವ ಜಿಎಸ್​ಟಿ ಮಂಡಳಿ 2024ರ ಡಿಸೆಂಬರ್​ 21ರಂದು ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಜಿಎಸ್​ಟಿ ಸಭೆ ನಡೆಯಲಿದೆ ಎಂದು ತಿಳಿಸಿದೆ.


ಮಂಡಳಿಯು ಕಳೆದ ಸಭೆಯನ್ನು ಸೆಪ್ಟೆಂಬರ್​ 9ರಂದು ನಡೆಸಿತ್ತು. ಇಲ್ಲಿ ಸಚಿವರ ಗುಂಪು ಅಕ್ಟೋಬರ್​ ಅಂತ್ಯದೊಳಗೆ ವಿಮೆ ಜಿಎಸ್​ಟಿ ಅಂತ್ಯಗೊಳಿಸುವ ಕುರಿತು ನಿರ್ಣಯ ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಸಚಿವರ ಗುಂಪು ಕಳೆದ ತಿಂಗಳು ವಿಮಾ ಪಾಲಿಸಿಗಳಿಗೆ ಪಾವತಿಸಿದ ವಿಮಾ ಕಂತುಗಳನ್ನು ಮತ್ತು ಹಿರಿಯ ನಾಗರಿಕರ ಆರೋಗ್ಯ ವಿಮೆಯನ್ನು ಜಿಎಸ್​ಟಿಯಿಂದ ವಿನಾಯಿತಿ ನೀಡಲು ಒಪ್ಪಿಕೊಂಡಿದೆ.


ಹಿರಿಯ ನಾಗರಿಕರ ಹೊರತಾಗಿ ವೈಯಕ್ತಿಕವಾಗಿ ಪಾವತಿಯಾದ ಐದು ಲಕ್ಷದವರೆಗಿನ ಆರೋಗ್ಯ ವಿಮೆಗೆ ವಿನಾಯಿತಿ ಪ್ರಸ್ತಾಪ ಮಾಡಲಾಗಿದೆ. ಆದಾಗ್ಯೂ, 5 ಲಕ್ಷಕ್ಕಿಂತ ಹೆಚ್ಚಿನ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಪಾಲಿಸಿಗಳಿಗೆ ಪಾವತಿಸಿದ ಪ್ರೀಮಿಯಂಗಳ ಮೇಲೆ ಶೇ 18ರಷ್ಟು ಜಿಎಸ್‌ಟಿ ಮುಂದುವರಿಯಲಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ