Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಹಾರ ಮೊತ್ತಕ್ಕೆ ಜಿಎಸ್‌ಟಿ ವಿಧಿಸುವಂತಿಲ್ಲ: ಹೈಕೋರ್ಟ್‌

ಬೆಂಗಳೂರು: ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ರೈತರು ಸೇರಿದಂತೆ ಇತರರಿಂದ ಭೂಮಿ ವಶಪಡಿಸಿಕೊಳ್ಳುವವರಿಗೆ ಪರಿಹಾರ ರೂಪದಲ್ಲಿ ನೀಡುವ ಮೊತ್ತಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.


ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಶೋಕಾಸ್ ನೋಟಿಸ್​​ಗಳನ್ನು ಪ್ರಶ್ನಿಸಿ ಬೆಂಗಳೂರಿನ ನಿವಾಸಿಗಳಾದ ಆರ್.ಆಶಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.


ಈ ಆದೇಶದಿಂದ ರೈತರು ತಾವು ಪಡೆಯುವ ಪರಿಹಾರಕ್ಕೆ ಜಿಎಸ್ಟಿ ತೆರಿಗೆ ಪಾವತಿಸುವ ಅಗತ್ಯ ವಿರುವುದಿಲ್ಲ. ಅಲ್ಲದೆ, ಇಷ್ಟವಿಲ್ಲದಿದ್ದರೂ ಭೂಮಿಯನ್ನು ಕಳೆದುಕೊಂಡಿರುವ ಮತ್ತು ಅದರ ಜತೆ ಭಾವನಾತ್ಮಕ ಸಂಬಂಧ ಹೊಂದಿರುವ ರೈತರು ಕಳೆದುಕೊಳ್ಳುವ ಭೂಮಿಗೆ ಪರ್ಯಾಯವಾಗಿ ನಷ್ಟ ತುಂಬಿಕೊಡಲು ಪರಿಹಾರ ಪಡೆಯುತ್ತಾರೆ. ಅದಕ್ಕೆ ಜಿಎಸ್​ಟಿ ಅಡಿ ತೆರಿಗೆ ವಿಧಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.


ಅರ್ಜಿದಾರರು ಮತ್ತು ಕೆಐಎಡಿಬಿಇ ನಡುವೆ ಆಗಿರುವ ಒಪ್ಪಂದದಲ್ಲಿ ಹಲವು ಷರತ್ತುಗಳು ಒಳಗೊಂಡಿರಬಹುದು. ಆದರೆ ಅದಕ್ಕೂ ಅರ್ಜಿದಾರರಿಗೆ ನೀಡುವ ಪರಿಹಾರ ಮೊತ್ತಕ್ಕೂ ಸಂಬಂಧವಿಲ್ಲ. ಅದನ್ನು ಸಿಜಿಎಸ್​ಟಿ/ಕೆಜಿಎಸ್​​ಟಿ ಶೆಡ್ಯೂಲ್-2ರಡಿ ಎಂಟ್ರಿ 5(ಇ) ಅಡಿ ಸೇವೆ ಎಂದು ಪರಿಗಣಿಸಲಾಗದು ಎಂದು ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ