Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೆರಿಲ್ಲಾ WAR ಉಪ್ಪಿ  ವಿಶೇಷ ಪೋಸ್ಟರ್    

    ಎಕೆ  47, ಲಾಕಪ್ ಡೆತ್,   ಕಲಾಸಿಪಾಳ್ಯ, ಹುಚ್ಚ ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ 'ಗೆರಿಲ್ಲಾ WAR'. ಈ ಚಿತ್ರದ ನಾಯಕರಾಗಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ.


      ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ 'ಗೆರಿಲ್ಲಾ WAR' ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

     ಪ್ರಸ್ತುತ ಓಂಪ್ರಕಾಶ್ ರಾವ್ ನಿರ್ದೇಶನದ ಬಹು ನಿರೀಕ್ಷಿತ 'ತ್ರಿಶೂಲಂ' ಚಿತ್ರದಲ್ಲೂ ಉಪೇಂದ್ರ ಅವರು ನಟಿಸಿದ್ದು, 'ಗೆರಿಲ್ಲಾ WAR' ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರವಾಗಿದೆ.


     ಬೇಬಿ ಇಂಚರ ಅರ್ಪಿಸುವ, ಎನ್ ಎಸ್ ರಾವ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಹಾಗೂ ಆರ್ ವಾಸುದೇವ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಡೆನ್ನಿಸಾ ಪ್ರಕಾಶ್ ಅವರು ಬರೆದಿರುವ ಕಥೆಗೆ ಓಂಪ್ರಕಾಶ್ ರಾವ್ ಅವರೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಅವರು ಹಾಡುಗಳನ್ನು ಬರೆದು ಸಂಗೀತ ಸಂಯೋಜಿಸುತ್ತಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ರವಿವರ್ಮ  ಸಾಹಸ ನಿರ್ದೇಶನವಿರುವ 'ಗೆರಿಲ್ಲಾ ವಾರ್' ಚಿತ್ರಕ್ಕೆ ದೀಪು ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ.


     ಉಪೇಂದ್ರ ಅವರಿಗೆ ನಾಯಕಿಯಾಗಿ ನಿಮಿಕಾ ರತ್ನಾಕರ್ ನಟಿಸುತ್ತಿದ್ದಾರೆ. ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಅಚ್ಯುತ್ ರಾವ್, ಭಾಸ್ಕರ್ ಶೆಟ್ಟಿ, ಆರಾಧ್ಯ, ಶ್ವೇತ ವೀರೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.


     "ಗೆರಿಲ್ಲಾ WAR' ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸುತ್ತದೆ. ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ. ಹಾಗಂತ ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಪ್ರಸಕ್ತ ನಾವು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಉಪೇಂದ್ರ ಅವರು ಈ ಚಿತ್ರದಲ್ಲಿ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಸೈನಿಕ ಗಡಿ ಮಾತ್ರ ಕಾಯುವ ಸೈನಿಕನಲ್ಲ‌‌. ಪ್ರಸ್ತುತ ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಧೀಮಂತ ನಾಯಕ. ಇನ್ನೂ, ಈಗಿನ ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರ ಮೂಡಿಬರಲಿದೆ" ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ