Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಗುರಿ-ಗುರು ಹಾಗೂ ಸ್ನೇಹಿತ-ಸಲಹೆ ತುಂಬಾ ಮುಖ್ಯ : ನ್ಯಾ. ಎ.ಎಂ.ಬಡಿಗೇರ

ಮಹಾಲಿಂಗಪುರ: ವಿದ್ಯಾರ್ಥಿದೆಸೆಯಲ್ಲಿ ಗುರುಗಳ ಮಾರ್ಗದರ್ಶನ ಮತ್ತು ಒಳ್ಳೆ ಸ್ನೇಹಿತರ ಸಲಹೆಗಳು ಸಾಧನೆಗೆ ಪೂರಕ ಎಂದು ಧಾರವಾಡದ ಸಿವಿಲ್ ಕೋರ್ಟ್ ನ್ಯಾಯಮೂರ್ತಿ ಎ.ಎಂ.ಬಡಿಗೇರ ಹೇಳಿದರು.
ಸ್ಥಳೀಯ ಕೆಎಲ್‌ಇ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ೩೮ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳನ್ನು ಜೀವನದಲ್ಲಿ ಸ್ವತಂತ್ರರಾಗಿ ಸಾಗುವಂತೆ ಮಾಡುವುದೇ ಶಿಕ್ಷಣ. ವಿದ್ಯಾರ್ಥಿಗಳು ಗುರುಗಳಿಗೆ ವಿಧೇಯರಾಗಿರಬೇಕು. ಜೀವನದಲ್ಲಿ ಕೆಟ್ಟ ವಿಷಯಗಳಿಗಿಂತ ಒಳ್ಳೆಯ ವಿಷಯಗಳಿಗೆ ಹೆಚ್ಚು ಆದ್ಯತೆ ನೀಡಿ, ಒಳ್ಳೆಯವರ ಸಹವಾಸ ಮಾಡಿ ಸಾಧನೆಗೆ ಸಹಾಯಕವಾಗುವ ಸಂಗತಿಗಳ ಬಗ್ಗೆ ಮಾತ್ರ ಯೋಚಿಸಬೇಕು. ಎಲ್ಲರೂ ಜನನ ಪ್ರಮಾಣಪತ್ರ ಆದಿಯಾಗಿ ಎಲ್ಲ ದಾಖಲೆಗಳನ್ನು ಸರಿಯಾಗಿ ನಮೂದಿಸಿಕೊಂಡು ಕಾಯ್ದುಕೊಳ್ಳಬೇಕು ಎಂದರು.

ಬೆಳಗಾವಿಯ ಆರ್.ಸಿ.ಯು ಕುಲಸಚಿವ (ಮೌಲ್ಯಮಾಪನ) ಪ್ರೋ. ಆರ್.ಎನ್. ಕದಮ್ ಮಾತನಾಡಿ ವಿವಿ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು, ವಿದ್ಯಾರ್ಥಿಗಳ ಹಿಂದಿನ ಎಲ್ಲಾ ಅಂಕಪಟ್ಟಿಗಳು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಆದ? ಬೇಗ ತಲುಪಲಿವೆ ಎಂದರು.

ಪ್ರಾಚಾರ್ಯ ಡಾ.ಕೆ.ಎಂ ಅವರಾದಿ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುಚಟಿಕೆಗಳಲ್ಲಿ ರಾ?, ರಾಜ್ಯ, ಅಂತರ ವಲಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಎರಡೂ ವಿಶ್ವವಿದ್ಯಾಲಗಳ ಕ್ರೀಡಾ ವಿಭಾಗದಲ್ಲಿ ’ಯುನಿವರ್ಸಿಟಿ ಬ್ಲೂ’ ಆಗಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಾನಾ ಸ್ಪರ್ಧೆಗಳಲ್ಲಿ (ಕ್ರೀಡಾ, ಸಾಂಸ್ಕೃತಿಕ, ಪ್ರತಿಭಾ ಪುರಸ್ಕಾರ) ವಿಜೇತ ನೂರಾರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಪಾಲಿಟೆಕ್ನಿಕ್ ಪ್ರಾಚಾರ್ಯ ಎಸ್.ಐ.ಕುಂದಗೋಳ, ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಅಶೋಕ ಅಂಗಡಿ, ಸಂತೋ? ಹುದ್ದಾರ, ಐಕ್ಯೂಎಸ್‌ಸಿ ಸಂಯೋಜಕಿ ಡಾ. ಸುನಂದಾ ಸೊರಗಾಂವಿ. ಪಿಯು ಪ್ರಾಚಾರ್ಯ ಎಲ್. ಬಿ. ತುಪ್ಪದ, ಉಪಪ್ರಾಚಾರ್ಯ ಬಿ. ಎನ್ ಅರಕೇರಿ, ಸಿಬ್ಬಂದಿ ಕಾರ್ಯದರ್ಶಿ ಎ. ಎಂ. ಉಗಾರೆ, ಪಿ.ಎಸ್.ಹಿಪ್ಪರಗಿ, ವಿ.ಎನ್.ಅಡಹಳ್ಳಿ, ಟಿ.ಡಿ,ಡಂಗಿ, ಸಿ.ಎಂ.ಐಗಳಿ, ಜೆ.ಆರ್.ಪಾಟೀಲ, ವಿನಾಯಕ ಬಡಿಗೇರ, ವಿದ್ಯಾರ್ಥಿ ಪ್ರತಿನಿಧಿ ಈಶ್ವರಿ ಕಾಗಿ, ಡಾ. ಸುನಂದಾ ಸೊರಗಾಂವಿ ಸ್ವಾಗತಿಸಿದರು. ವಾಣಿಶ್ರೀ ಕುದರಿ ಹಾಗೂ ಕೀರ್ತನಾ ಪೂಜಾರಿ ನಿರೂಪಿಸಿದರು. ಡಾ. ಎಸ್. ಎಸ್. ಕೋಳಿ ವಂದಿಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ