ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ಮತ್ತು ಕೈಗೆ ಕಟ್ಟುವ ದಾರಗಳ ಬಗ್ಗೆ ಪ್ರಶ್ನಿಸಿದ್ದ ಅತಿಥಿ ಶಿಕ್ಷಕ ಮದರಶಾ ಎಸ್ ಮಕಂದಾರ್, ಮಕ್ಕಳಿಂದ 200 ಬಸ್ಕಿ ಹೊಡೆಸಿದ್ದ. ಆತನ ಈ ವರ್ತನೆಯಿಂದ ನೊಂದ ಮಕ್ಕಳು ಶಾಲೆಯ ಪ್ರಾಂಶುಪಾಲರಿಗೆ ಈ ಬಗ್ಗೆ ದೂರು ನೀಡಿದ್ದರು. ನಂತರ ಈ ಘಟನೆಯನ್ನರಿತ ಪಾಲಕರು ಮತ್ತು ಗ್ರಾಮಸ್ಥರು ಶಾಲೆಯ ಮುಂದೆ ಜಮಾಯಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.
ಶಿಕ್ಷಕನ ದುರ್ವರ್ತನೆಯ ಕುರಿತು ಪ್ರಶ್ನೆ ಮಾಡಿದ್ದ ಪಾಲಕರು ಮತ್ತು ಶಿಕ್ಷಕ ನಡುವಿನ ಈ ಗಲಾಟೆಯ ವೀಡಿಯೋ ವೈರಲ್ ಆಗಿತ್ತು. ಮಾತುಕತೆ ವೇಳೆ ಶಿಕ್ಷಕ ತಾನು ಮಾಡಿದ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಆಡಳಿತ ಮಂಡಳಿ ಶಿಕ್ಷಕ ಮದರಶಾನನ್ನು ಕೆಲಸದಿಂತ ಕಿತ್ತು ಹಾಕಿದೆ.