LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇರುವೆ ಕಚ್ಚಿ ಐಸಿಯುವಿನಲ್ಲಿದ್ದ ಹಸುಳೆ ಸಾವು?

ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವಜಾತ ಶಿಶುವೊಂದು ಇರುವೆ ಕಚ್ಚಿ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣವೆಂದು ಪೋಷಕರು ದೂರುತ್ತಿದ್ದಾರೆ. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿಹಾಕಿದ್ದು, ಮಗು ಅಕಾಲಿಕ ಜನನದಿಂದಾಗಿ ಸಾವನ್ನಪ್ಪಿದೆ ಎಂದು ಸ್ಪಷ್ಟಪಡಿಸಿದೆ.

ಮೈಸೂರು, ಏಪ್ರಿಲ್​​ 23: ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್​​ ಆಗಿದ್ದ ರೋಗಿಯೋರ್ವ ನರಳಿ ನರಳಿ ಪ್ರಾಣಬಿಟ್ಟಿರುವ ಆರೋಪ ನಿನ್ನೆಯಷ್ಟೇ ಕೇಳಿಬಂದಿತ್ತು. ಅದು ಮಾಸುವ ಮುನ್ನವೇ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವಜಾತ ಶಿಶುವೊಂದು ಇರುವೆ ಕಚ್ಚಿ ಮೃತಪಟ್ಟಿರುವ ಬಗ್ಗೆ ಮೈಸೂರಿನಲ್ಲಿ (Mysuru) ದೂರು ಕೇಳಿಬಂದಿದೆ. ಚೆಲುವಾಂಬ ಆಸ್ಪತ್ರೆವಿರುದ್ಧ ಮೃತ ಮಗುವಿನ ಪೋಷಕರು ದೂರಿದ್ದು, ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಹಸುಳೆಯ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಏಪ್ರಿಲ್ 15ರಂದು ಅವಧಿ ಪೂರ್ವ ಗಂಡು ಮಗುವಿನ ಜನನವಾಗಿತ್ತು. ಕೇವಲ 7 ತಿಂಗಳಿಗೆ ಹುಟ್ಟಿದ್ದ ಮಗು 1 ಕೆಜಿ 40 ಗ್ರಾಂ ಮಾತ್ರ ತೂಕ ಹೊಂದಿತ್ತು. ಈ ಹಿನ್ನೆಲೆ ಚೆಲುವಾಂಬ ಆಸ್ಪತ್ರೆಯ ಐಸಿಯುನಲ್ಲಿ ಶಿಶುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಮಗುವಿಗೆ ಇರುವೆ ಕಚ್ಚಿರುವ ಆರೋಪ ಕೇಳಿಬಂದಿದೆ. ತುಂಬಾ ಇರುವೆಗಳಿದ್ದ ಬಗ್ಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಈ ಮೊದಲೇ ತಿಳಿಸಿದ್ದೆವು. ಆದರೆ ಸಿಹಿ ಕಾರಣಕ್ಕೆ ಒಂದೆರಡು ಇರುವೆಗಳು ಬಂದಿವೆ ಎಂಬ ಸಮಜಾಯಿಷಿಯನ್ನು ಅವರು ನೀಡಿದ್ದರು. ಈಗ ನೋಡಿದರೆ ಮಗುವೇ ತೀರಿಕೊಂಡಿದೆ ಎಂದು ಪೋಷಕರು ಅಲವತ್ತುಕೊಂಡಿದ್ದಾರೆ. ಅಲ್ಲದೆ, ನಮಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ.

ಆರೋಪ ಅಲ್ಲಗಳೆದ ಆಸ್ಪತ್ರೆ

ಇನ್ನು ಮೃತ ಮಗುವಿನ ಪೋಷಕರ ಆರೋಪಗಳನ್ನು ಆಸ್ಪತ್ರೆಯ ಪ್ರಭಾರ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್ ಅಲ್ಲಗಳೆದಿದ್ದಾರೆ. 21 ವಾರಕ್ಕೆ ಮಗು ಹುಟ್ಟಿದ್ದು, ಜನನದ ಸಂದರ್ಭ ಶಿಶು ಕೇವಲ 1 ಕೆಜಿ ಇತ್ತು. ಮಗು ಅಳುತ್ತಿಲ್ಲ ಎನ್ನುವ ಕಾರಣಕ್ಕೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದೆವು. ಐಸಿಯುನಲ್ಲಿ ಚಿಕಿತ್ಸೆ ಹಿನ್ನೆಲೆ ಮಗುವಿನ ಕೈ ಮತ್ತು ಬಾಯಿಗೆ ಪ್ಲಾಸ್ಟರ್ ಹಾಕಿದ್ದೆವು. ಹೀಗಾಗಿ ಆ ಭಾಗದಲ್ಲಿ ಮಾರ್ಕ್​​ಗಳು ಉಂಟಾಗಿವೆ. ಕಳೆದ ಒಂದು ವಾರದಿಂದ ಮಗುವಿನ ಜೀವ ಉಳಿಸಲು ಪ್ರಯತ್ನ ಮಾಡಲಾಗಿದೆ. ನಮ್ಮ ಸಿಬ್ಬಂದಿಗಳಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ. ಐಸಿಯುನಲ್ಲಿ ಗ್ಲೂಕೊಸ್ ಇರುವುದರಿಂದ ಒಂದೊಂದು ಇರುವೆ ಇರಬಹುದು. ಆದರೆ ಮಗುವಿನ ಪೋಷಕರು ಹೇಳುವಂತೆ ಇರುವೆ ಕಚ್ಚಿ ಸಾವು ಉಂಟಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ