Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನದಲ್ಲಿ ಬಿಜೆಪಿ ಅಸಹಕಾರ, ಮಂಡ್ಯದಲ್ಲಿ ಸುಮಲತಾ ದೂರ: ಹೆಚ್.ಡಿ. ದೇವೇಗೌಡ ಬೇಸರ

ಹಾಸನ, ಏಪ್ರಿಲ್ 24: ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಮೈತ್ರಿಯಲ್ಲಿ ಇನ್ನೂ ಪೂರ್ಣ ಒಮ್ಮತ ಮೂಡದಿರುವ ಬಗ್ಗೆ ಸುಳಿವು ನೀಡಿದ್ದಾರೆ. ಆದಾಗ್ಯೂ, ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ನೀವು ಕೇಳಬಹುದು. ನಾವು ಈ ಭಾಗದ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡಿಲ್ಲ. ಹಾಗೆಂದು ಅದರಿಂದ ಕುಮಾರಸ್ವಾಮಿಗೆ ಬಹಳ ಅಪಾಯ ಆಗಿಬಿಡುತ್ತದೆ ಎನ್ನೋ ಹಾಗಿಲ್ಲ ಎಂದು ದೇವೇಗೌಡರು ಹೇಳಿದರು.

ಕಳೆದ ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಹೋರಾಟ ನಡೆದಿದೆ. ಸಂಪತ್ತು ಹಂಚಿಕೆ ಬಗ್ಗೆ ಎರಡು ಪಕ್ಷಗಳ ನಡುವ ದೊಡ್ಡ ಚರ್ಚೆ ನಡೆದಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಚಾರ ಹೇಳಿದೆ. ಅವರು ಹೇಗಾದರೂ ಸರಿ, ಅಧಿಕಾರಿಕ್ಕೆ ಬರಬೇಕು ಎಂದು ಹೊರಟಿದ್ದಾರೆ. ಸಂಪತ್ತಿನ ಸರ್ವೇ ಹಾಗೂ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಪಾಪ ಎಂದು ದೇವೇಗೌಡ ಲೇವಡಿ ಮಾಡಿದ್ದಾರೆ.

ನಾನು ಕಾವೇರಿ ಭಾಗದ ಎಲ್ಲ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರ ಜೊತೆ ಎರಡು ಸಭೆಗಳಲ್ಲಿ ಭಾಗಿಯಾಗಿದ್ದೇನೆ. ಎರಡನೆ ಹಂತದ ಚುನಾವಣೆ ಭಾಗದಲ್ಲೂ ಪ್ರಚಾರ ನಡೆಸುತ್ತೇನೆ. ಮೊದಲ‌ ಹಂತದ ಚುನಾವಣೆಯ ಈ ಭಾಗದಲ್ಲಿ ಬಿಜೆಪಿ ಜೆಡಿಎಸ್ ಸೇರಿ ಪ್ರಚಾರ ಮಾಡುತ್ತಿದ್ದೇವೆ. ಕಾವೇರಿ ಹೋರಾಟ ಜೀವನ್ಮರಣದ ಪ್ರಶ್ನೆ. ಹಾಗಾಗಿಯೇ ನಾವು 28ಕ್ಕೆ 28 ಸ್ಥಾನ‌ ಗೆಲ್ತೇವೆ. ಮೋದಿಯವರು ಡಿಎಂಕೆ ಹಂಗಿನಿಂದ ದೇಶ ಆಳುವ ಪರಿಸ್ಥಿತಿ ಬರುವುದಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ದೇವೇಗೌಡ ಆಶಯ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಸ್ಲಿಮರಿಗೆ ಸಂಪತ್ತು ಹಂಚಲು ಹೊರಟಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ, ಈ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ನಾನು ಚಿಕ್ಕ ಮಗು ಅಲ್ಲ ಎಂದು ಮಾದ್ಯಮಗಳ ವಿರುದ್ಧವೇ ಗರಂ ಆದರು.

ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಎಲ್ಲಿ ನೋಡಿದರೂ ಜನ ಸಾಗರ. ಅಲ್ಲಿ ನಾನು ನಿನ್ನೆ ಏಳು ಸಭೆ ಮಾಡಿದ್ದೇನೆ. ಆ ಜನ ಸಾಗರದ ನಡುವೆ ಒಂದೊಂದು ಸಭೆ ಮೂರು ಗಂಟೆ ತಡವಾಗಿದೆ. ಅವರು (ಕಾಂಗ್ರೆಸ್) ದುಡ್ಡಿನ ಹೊಳೆ ಹರಿಸಿದರೂ ಗೆಲ್ಲುವುದು ನಾವೇ ಎಂದು ದೇವೇಗೌಡರು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ