Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ದುರಹಂಕಾರಕ್ಕೆ ’ಲೋಕ’ ಕದನದಲ್ಲಿ ತಕ್ಕ ಉತ್ತರ: ಹೆಚ್‌ಡಿ ದೇವೇಗೌಡ

ಹಾಸನ,ಏ.01: ಜೆಡಿಎಸ್ ಪಕ್ಷದಲ್ಲೆ ಬೆಳೆದು ಮತ್ತೆ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕರೆ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.

ಹಾಸನ ತಾಲೂಕಿನ ಸಾಲಗಾಮೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ನಮ್ಮ ಪಕ್ಷದಲ್ಲೇ ಬೆಳೆದು ಈಗ ಅಧಿಕಾರದ ಅಹಂನಿಂದ ಬಾಯಿಗೆ ಬಂದಂತೆ ಮಾತನಾಡುವ ಜತೆಗೆ ಹಾಸನಕ್ಕೆ ಮೂರು ಬಾರಿ ಬಂದು ಪ್ರಜ್ವಲ್ ಸೋಲಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರಿಗೆ ಈ ಬಾರಿ ಮುಖಭಂಗ ಮಾಡುವ ಕೆಲಸವನ್ನು ನನ್ನ ಜಿಲ್ಲೆಯ ಜನರು ಮಾಡಬೇಕಿದೆ’ ಎಂದು ಹೇಳಿದರು.

‘ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಸಲುವಾಗಿ ಕೇಂದ್ರ ಹಣ ನೀಡುತ್ತಿಲ್ಲ ಎಂದು ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಧಾವೆ ಹೂಡಿದೆ, ಪ್ರಬಲವಾದ ಪ್ರಧಾನಿ ದೇಶಕ್ಕೆ ಇರಬಾರದು ಎಂಬ ಹೇಳಿಕೆ ನೀಡಿದ್ದಾರೆ. ಪ್ರಬಲವಾದ ಪ್ರಧಾನ ಮಂತ್ರಿ ಇದ್ದರೆ ಇವರು ಕೇಳಿದಂತೆ ಹಣ ನೀಡುವುದಿಲ್ಲ ಎಂದು ಈ ರೀತಿ ಹೇಳಿದ್ದಾರೆ’ ಎಂದು ದೂರಿದರು. ‘ದೇಶದ ಆಡಳಿತ ವ್ಯವಸ್ಥೆಯಲ್ಲಿ ಫೈನಾನ್ಸ್ ಕಮಿಷನ್ ಪ್ರತಿ ರಾಜ್ಯದ ಆರ್ಥಿಕ ಸ್ಥಿತಿ ಗತಿಗಳ ಬಗ್ಗೆ ಪರಿಶೀಲನೆ ನಡೆಸಿ ಆರ್ಥಿಕ ಸಮಸ್ಯೆ ಹೊಂದಿರುವ ಹಣವನ್ನು ಒದಗಿಸುವ ಕೆಲಸವನ್ನು ಮಾಡುತ್ತದೆ. ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡು ತಮ್ಮ ಬಳಿ ಹಣ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಧಾವೆ ಹೂಡುವುದು ಸರಿಯಲ್ಲ.

ಡಿಎಸ್ ಎಲ್ಲಿದೆ ಎಂದು ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ. ಅವರಿಗೆ ಜೆಡಿಎಸ್ ಎಲ್ಲಿದೆ ಎಂಬುದನ್ನು ತೋರಿಸುತ್ತೇನೆ, ಈ ಭಾಗದ ಎಲ್ಲರೂ ಈ ಬಾರಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಮತ ನೀಡುವ ಮೂಲಕ ಅಧಿಕ ಮತಗಳ ಹಂತರದಿಂದ ಗೆಲ್ಲಿಸುವ ಕೆಲಸ ಮಾಡಬೇಕು’ ಎಂದು ಮನವಿ ಮಾಡಿದರು.. ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ‘ಈ ಹಿಂದೆ ಫಲವತ್ತಾದ ಜಮೀನಿನಲ್ಲಿ ಬೆಳೆಗಳಿಗೆ ಮಾರಕವಾಗಿ ಬೆಳೆಯುತ್ತಿದ್ದ ಕಾಂಗ್ರೆಸ್ ಗಿಡ ಕಿತ್ತು ಹಾಕುತ್ತಿದ್ದೆವು. ಅದೇ ರೀತಿ ಈ ಬಾರಿಯ ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತು ಹಾಕುವ ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ದಿ ಮರೀಚಿಕೆಯಾಗಿದೆ’ ಎಂದು ಹೇಳಿದರು.



ಸರಿಯಾದ ವಿದ್ಯುತ್ ನೀಡದೆ ಇರುವ ಬೋರ್ವೆಲ್‌ಗಳಿಂದಲೂ ನೀರನ್ನು ಪಡೆಯಲಾಗದಂತಹ ಪರಿಸ್ಥಿತಿಯಲ್ಲಿ ಹಾಸನ ಜಿಲ್ಲೆಯ ರೈತರಲ್ಲಿ ಇದೆ. ಆದುದರಿಂದ ಮುಂದಿನ ದಿನಗಳಲ್ಲಿ ರೈತ ಪರ ಸರ್ಕಾರವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದರು ಮಾಜಿ ಸಚಿವ ಎಚ್.ಡಿ. ರೇವಣ್ಣ, ಶಾಸಕ ಸ್ವರೂಪ್ ಪ್ರಕಾಶ್, ಮಾಜಿ ಶಾಸಕ, ವೈ ಎಸ್.ವಿ.ದತ್ತ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಮೂರ್ತಿ, ಸತ್ಯನಾರಾಯಣ, ಸೀಗೆ ನಂಜುಂಡಪ್ಪ, ಶಿವನಂಜಪ್ಪ, ಶಿವಣ್ಣ , ಕುಮಾರ್ ಇದ್ದರು. ಹಾಸನ ತಾಲೂಕಿನ ಸಾಲಗಾಮೆಯಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯನ್ನು ಎಚ್‌.ಡಿ.ದೇವೇಗೌಡ ಉದ್ಘಾಟಿಸಿದರು.

 

 

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ