Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಯಡಿಯೂರಪ್ಪನವರ ವಿರುದ್ಧ ದೂರು ಕೊಟ್ಟು ಮುಜುಗರ ಉಂಟು ಮಾಡಿದ್ದಾರೆ"

ಬೆಂಗಳೂರು: ಒಬ್ಬ ಹೆಣ್ಣು ಮಗಳು ಬೇರೆ ಬೇರೆ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಮ್ಮ ತಂದೆಯವರ ಮನೆಗೆ ಬಂದಿದ್ದರು. ಆದರೆ ದುರುದ್ದೇಶದಿಂದ ಆ ಮಹಿಳೆ ದೂರು ಕೊಟ್ಟು ಮುಜುಗರ ಮಾಡಿದ್ದಾರೆ. ಇದರಿಂದ ನಮ್ಮ ಇಡೀ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬಹಳ‌ ನೋವುಂಟಾಗಿದೆ ಎಂದು ಸಂಸದ, ಬಿಎಸ್​ವೈ ಪುತ್ರ ಬಿ.ವೈ. ರಾಘವೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.


ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಜಾಮೀನು ರೀತಿಯಲ್ಲಿ ನಮಗೆ ಅವಕಾಶ ಸಿಕ್ಕಿದೆ. ಬರುವಂತ ದಿನಗಲ್ಲಿ ಸತ್ಯಾಸತ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಕೆಲಸವನ್ನು ವಕೀಲರು ಮಾಡ್ತಾರೆ. ಸುಳ್ಳು ಆರೋಪದ ಮೂಲಕ ನಮ್ಮನ್ನು ರಾಜಕೀಯವಾಗಿ ಮಣಿಸುವಂತ ಪ್ರಕರಣಗಳು ನಮ್ಮ ಮೇಲೆ ಬಹಳಷ್ಟು ನಡೆದಿವೆ. ಆಗ ನಮಗೆ ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ. ಈಗಲೂ ಸಹ ವಿಶ್ವಾಸ ಇದೆ, ಈ ಸುಳ್ಳು ಆರೋಪದಿಂದ ನಮ್ಮ ತಂದೆಯವರು ಮುಕ್ತರಾಗುತ್ತಾರೆ ಎಂದು ಹೇಳಿದರು.


ಯಡಿಯೂರಪ್ಪನವರು ಜೀವನ ಪೂರ್ತಿ ಹೋರಾಟದ ಮೂಲಕ ಈ ನಾಡಿಗೆ ನ್ಯಾಯ ಕೊಟ್ಟವರು. ದಕ್ಷಿಣ ಭಾರತದಲ್ಲಿ ಬಿಜೆಪಿ ಭದ್ರಕೋಟೆಯಾಗಿ ಕರ್ನಾಟಕ ಇದೆ. ಹೀಗಾಗಿ ಇವರ ವಿರುದ್ಧ ಕಾಣದ ಕೈಗಳು ಈ ರೀತಿ ಮಾಡಿದ್ದಾರೆ. ನ್ಯಾಯಾಲಯ ನಮಗೆ ರಕ್ಷಣೆ ಕೊಟ್ಟಿದೆ. ಮುಂದೆ ನ್ಯಾಯಾಲಯಕ್ಕೂ‌ ನಾವು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ. ಯಡಿಯೂರಪ್ಪ ಕೂಡ ಇಂದು ಮನೆಗೆ ಬರುತ್ತಿದ್ದಾರೆ ಎಂದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ