Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅಮಾನತ್ತು

ರಾಯಬಾಗ: ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ಮುಜುಗರ ಉಂಟುಮಾಡಿರುವ ತಾಲೂಕಿನ ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್. ಅವರು ಗುರುವಾರ ಸೇವೆಯಿಂದ ಅಮಾನತ್ತು ಮಾಡಿ ಆದೇಶ ಮಾಡಿರುತ್ತಾರೆ.
ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರು ಮೇ.೨೭ ರಂದು ತಾಲೂಕಿನ ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ನಾಲ್ಕು ಶಾಲೆ ಕೊಠಡಿಗಳನ್ನು ಮಂಜೂರು ಮಾಡಿಸಬೇಕೆಂದು ಆಗ್ರಹಿಸಿ ನಿಡಗುಂದಿ ಶಾಲೆಯಿಂದ ಪಟ್ಟಣದ ಬಿಇಒ ಕಚೇರಿ ವರೆಗೆ ಮೌನ ಕಾಲ್ನಡಿಗೆ ಮೂಲಕ ಆಗಮಿಸಿ, ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಉಪವಾಸ ಸತ್ಯಾಗ್ರಹ ನಡೆಸಿದ್ದರು.
ಸರ್ಕಾರಿ ನೌಕರರು ಸರ್ಕಾರದ ವಿರುದ್ಧ ಪ್ರತಿಭಟನೆ, ಸತ್ಯಾಗ್ರಹ ನಡೆಸಲು ಅವಕಾಶ ಇಲ್ಲವೆಂದು ಬಿಇಒ ಮತ್ತು ತಹಶೀಲ್ದಾರ ಅವರು ಹೇಳಿದ್ದರೂ, ಅಂದು ಅವರ ಮಾತನ್ನು ಕೇಳದೇ ಪ್ರತಿಭಟನೆ ನಡೆಸಿ, ಉಪವಾಸ ಸತ್ಯಾಗ್ರಹ ನಡೆಸಿದ್ದರಿಂದ, ಬಿಇಒ ಅವರು ಮೇಲಾಧಿಕಾರಿಗಳ ಗಮನಕ್ಕೆ ತಂದು ಕರ್ತವ್ಯ ಲೋಪದಡಿ ವೀರಣ್ಣ ಮಡಿವಾಳರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಬಿಇಒ ಅವರು ಈಗಾಗಲೇ ಶಾಲೆಯನ್ನು ೭ನೇ ತರಗತಿ ವರೆಗೆ ಉನ್ನತಿಕರೀಸಿದ್ದು, ಜೊತೆಗೆ ೨ ಕೊಠಡಿಗಳನ್ನು ಮಂಜೂರು ಮಾಡಿರುವುದಾಗಿ ತಿಳಿಸಿದ್ದರು. ತಹಶೀಲ್ದಾರರವರು ಕೂಡಲ ವೀರಣ್ಣ ಅವರನ್ನು ಮನವೊಲಿಸಿ ಸತ್ಯಾಗ್ರಹ ಹಿಂಪಡೆಯಲು ತಿಳಿಸಿದ್ದರಿಂದ ಶಿಕ್ಷಕ ವೀರಣ್ಣ ಅವರು ಪ್ರತಿಭಟನೆ ಹಿಂಪಡೆದಿದ್ದರು.

ಪ್ರಕರಣ : ತಾಲೂಕಿನ ನಿಡಗುಂದಿ ಗ್ರಾಮದ ಅಂಬೇಡ್ಕರ ತೋಟದ ಸರಕಾರಿ ಶಾಲೆಗೆ ಹೆಚ್ಚುವರಿ ಕೊಠಡಿಗಳ ಮಂಜೂರಾತಿಗಾಗಿ ಆಗ್ರಹಿಸಿ ಶಾಲೆಯ ಮುಖ್ಯೋಪಾಧ್ಯಾಯ ವೀರಣ್ಣ ಮಡಿವಾಳರ ಅವರು ಮಂಗಳವಾರ ಮಧ್ಯಾಹ್ನ ನಿಡಗುಂದಿ ಅಂಬೇಡ್ಕರ ತೋಟದ ಶಾಲೆಯಿಂದ ರಾಯಬಾಗ ಪಟ್ಟಣದ ಬಿಇಒ ಕಚೇರಿ ವರೆಗೆ ಅಂಬೇಡ್ಕರ ಭಾವಚಿತ್ರದೊಂದಿಗೆ ಕಾಲ್ನಡಿಗೆ ಮೂಲಕ ಆಗಮಿಸಿ ಪಟ್ಟಣದ ಬಿಇಒ ಕಚೇರಿಯ ಮುಂಭಾಗದಲ್ಲಿ ಕುಳಿತು ಉಪವಾಸ ಸತ್ಯಾಗ್ರಹ ನಡೆಸಿದರು.

 ಶಾಲೆಯ ಮುಖ್ಯೋಪಾಧ್ಯಾಯ ವೀರಣ್ಣ ಮಡಿವಾಳರವರು ನಿಡಗುಂದಿಯ ಅಂಬೇಡ್ಕರ ತೋಟದ ಸರ್ಕಾರಿ ಶಾಲೆಯನ್ನು ಹೈಟೆಕ್‌ ಶಾಲೆಯನ್ನಾಗಿ ಪರಿವರ್ತಿಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಈ ಶಾಲೆಯಲ್ಲಿ ಈಗ 146 ಮಕ್ಕಳು ಓದುತ್ತಿದ್ದರೂ ಸಂಖ್ಯೆಗನುಗುಣವಾಗಿ ಕೊಠಡಿಗಳಿಲ್ಲದಿರುವುದರಿಂದ ವೀರಣ್ಣ ಅವರು ಇನ್ನು ಹೆಚ್ಚುವರಿ ಎರಡು ಕೊಠಡಿ ನಿರ್ಮಾಣಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳು ಕಳೆದರೂ ನಿಡಗುಂದಿ ಅಂಬೇಡ್ಕರ ಶಾಲೆಗೆ ಯಾವೊಬ್ಬ ಅಧಿಕಾರಿಯೂ ಇಚ್ಛಾಶಕ್ತಿ ತೋರದೆ ಶಾಲೆಗೆ ಬೇಕಾಗಿರುವ ಕೊಠಡಿಗಳನ್ನು ಮಂಜೂರು ಮಾಡದಿರುವುದು ಬೇಸರ ತರಿಸಿದೆ. ಹೀಗಾಗಿ ಕೊಠಡಿಗಳ ಮಂಜೂರಾತಿಗಾಗಿ ಆಗ್ರಹಿಸಿ ನಾನು ಪ್ರತಿಭಟನೆಗೆ ಮುಂದಾಗಿದ್ದೇನೆ. ನಮ್ಮ ಶಾಲಾ ಮಕ್ಕಳಿಗೆ ಕೊಠಡಿಗಳು ಮಂಜೂರು ಆಗುವವರೆಗೂ ಆಮರಣ ಉಪವಾಸ  ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ