Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿ,ಜಿಪಂ ಸಿಇಒಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ: ಡೆಂಘಿ ನಿಯಂತ್ರಣಕ್ಕಾಗಿ ಸೂಚನೆ

ಬಳ್ಳಾರಿ,ಜು.೨೬ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಡೆಂಘಿ ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಅವರಿಗೆ ಸೂಚಿಸಿದರು.

ಅವರು, ಗುರುವಾರದಂದು ಡೆಂಘಿ ಜ್ವರ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಬೆಂಗಳೂರಿನ ತಮ್ಮ ಕಚೇರಿಯಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಅವರು ಮಾತನಾಡಿದರು.

ಡೆಂಘಿ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘಿ ಪ್ರಕರಣ ಕಂಡುಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು ಮತ್ತು ಆ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ತಿಳಿಸಿದರು.

ಮನೆ ಸುತ್ತ ಮುತ್ತ ಸ್ವಚ್ಛತೆ ಕೈಗೊಳ್ಳುವಂತೆ ತಿಳಿಸಬೇಕು. ಮನೆ ಆವರಣ, ಹಿಂಭಾಗ ಮಳೆ ನೀರು ನಿಲ್ಲದಂತೆ ಎಚ್ಚರವಹಿಸಲು, ನೀರು ಬಳಸುವ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವಂತೆ ಸೂಚಿಸಬೇಕು. ಗ್ರಾಮಗಳ ಜಾನುವಾರು ಕುಡಿಯುವ ನೀರಿನ ಸಂಗ್ರಹ ತೊಟ್ಟಿಗಳನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು.

ಸೊಳ್ಳೆ ಲಾರ್ವಾ  ಉತ್ಪತ್ತಿಯಾಗದಂತೆ ವಾರಕ್ಕೊಮ್ಮೆ ಮನೆ ಭೇಟಿ ನಡೆಸಿ, ಲಾರ್ವಾ ಸಮೀಕ್ಷೆ, ಜಾಗ್ರತೆ ಮತ್ತು ಅಗತ್ಯ ಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಅದನ್ನು ಮೇಲ್ವಿಚಾರಣೆ ನಡೆಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತ ರಂದೀಪ್.ಡಿ ಹಾಗೂ ಅನೇಕರು ಇದ್ದರು.
ಬಳಿಕ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಡೆಂಘಿ ನಿಯಂತ್ರಣದಲ್ಲಿದ್ದು, ಇನ್ನು ಹೆಚ್ಚು ಹೆಚ್ಚು ಮಾದರಿ ಪರೀಕ್ಷೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಇರಿಸಿಕೊಳ್ಳಬೇಕು. ಕುಡಿಯುವ ನೀರು ಕಲುಷಿತಗೊಳ್ಳದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕೀಟ ಶಾಸ್ತ್ರಜ್ಞೆ ಡಾ.ನಂದಾಕಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ