Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅವರು ಗರಂ ಆದರು.


ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನು ಜನರ ಮನೆಗೆ ಪೂರೈಸುತ್ತಿದ್ದಾರೆ. ಇದು ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಡ್ರಗ್ ಕಂಟ್ರೋಲ್ ಇಲಾಖೆಯ ಮುಖ್ಯ ಉದ್ದೇಶವೇ ಪಬ್ಲಿಕ್ ಹೆಲ್ತ್. ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಔಷಧಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಆದರೆ, ಆ ರೀತಿಯ ಕಾರ್ಯವೈಖರಿ ಇಲಾಖೆಯ ಅಧಿಕಾರಿಗಳಿಂದ ಕಂಡುಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಔಷಧಿಗಳ ಗುಣಮಟ್ಟದ ವಿಚಾರದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳುತ್ತಿದ್ದೀರಿ ಎಂಬ ಬಗ್ಗೆ ವಿಸ್ತೃತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಷ್ಟು ಕಳಪೆ ಔಷಧಿಗಳ ತಯಾರಕರ ಮೇಲೆ ಕ್ರಮ ತೆಗೆದುಕೊಂಡಿದ್ದೀರಾ? ಯಾವ ಔಷಧಿಗಳನ್ನು ಟೆಸ್ಟಿಂಗ್‌ಗೆ ಒಳಪಡಿಸಲಾಗಿದೆ, ಕಳಪೆ ಗುಣಮಟ್ಟದ ಔಷಧಿಗಳು ಮಾರುಕಟ್ಟೆಯಲ್ಲಿ ಸಿಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸುವಂತೆ ಡ್ರಗ್ ಕಂಟ್ರೋಲರ್​ಗೆ ಸೂಚನೆ ನೀಡಿದರು.


ಎಷ್ಟು ಫಾರ್ಮಸಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಬಗ್ಗೆ ವರದಿ ಕೊಡಿ. ಸುಮ್ಮನೆ ಸ್ಪೆಷಲ್ ಡ್ರೈವ್ ಮಾಡುತ್ತಿದ್ದೇವೆ ಎಂದು ಭಾಷಣ ಬಿಗಿಯಬೇಡಿ. ನೀವು ಕೊಡುತ್ತಿರುವ ಅಂಕಿ ಅಂಶಗಳಲ್ಲಿ ಯಾವುದೇ ಪರಿಣಾಮಕಾರಿ ಕಾರ್ಯ ಕಂಡುಬರುತ್ತಿಲ್ಲ ಎಂದು ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸಚಿವರು ಚಾಟಿ ಬೀಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ