Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾಸ್ಥ್ಯ ಸಂಕಲ್ಪ ಯೋಜನೆ ಕಾರ್ಯಕ್ರಮ


ಯರಗಟ್ಟಿ,ಜು,೨೫ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೂಪಿಸಿರುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಇದರ ಯಶಸ್ವಿ ಅನುಷ್ಟಾನಕ್ಕೆ ವ್ಯಾಪಕ ಪ್ರಚಾರ ಮತ್ತು ಅನುಸರಣಾ ಕಾರ್ಯ ರೂಢಿಸಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯರಗಟ್ಟಿ ತಾಲೂಕಿನ ಕೃಷಿ ಅಧಿಕಾರಿ ಬಸವರಾಜ ಶಿಗ್ಗಾಂವಿ ತಿಳಿಸಿದರು.
ಸಮೀಪದ ತಲ್ಲೂರು ಗ್ರಾಮದ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾದ ಸ್ವಾಸ್ಥ್ಯ ಸಂಕಲ್ಪ ಯೋಜನೆಯನ್ನು ಯರಗಟ್ಟಿ ಬಾಲಕಿಯರ ವಸತಿ ನಿಲಯ ಪಾಲಕರಾದ ಹಾಗೂ ಸಂಪನ್ಮೂಲ ವ್ಯಕ್ತಿಯಾದ ಆಶಾ ಪರೀಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕುಟುಂಬದ ಕಣ್ಮಣಿಗಳಾಗಿದ್ದು ಪೋಷಕರ ಅಭಿಲಾಷೆಯಂತೆ ಅವರು ವಿದ್ಯಾಭ್ಯಾಸದಲ್ಲಿ ತೊಡಗಿ ಪ್ರಗತಿ ಸಾಧಿಸಬೇಕು. ವಿದ್ಯಾರ್ಥಿಗಳು ತಮ್ಮ ಆರೋಗ್ಯ ಪಾಲನೆಗೆ ಹಲವು ಮೂಲ ತಿಳುವಳಿಕೆಗಳನ್ನು ಗಳಿಸುವ ಅಗತ್ಯವಿದೆ ಎಂದರು.
ಇಂದಿನ ದಿನಮಾನದಲ್ಲಿ ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ಸಹವಾಸ ದೋಷ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ  ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ ಎಂದು ವಿವರಿಸಿದರು. ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದರು. 
ಮುಖ್ಯ ಶಿಕ್ಷಕ ಎಂ. ಎಚ್. ದುಂಡನಕೊಪ್ಪ, ಎ. ಜೆ. ಕಾಂಬಳೆ, ಎಸ್. ಎಫ್. ಬಡಿಗೇರ, ಜೆ. ಎ. ಕೊಟ್ರಶೆಟ್ಟಿ, ಎಲ್. ವ್ಹಿ. ಪಾಟೀಲ, ಬಿ. ಸಿ. ಸೂಣದೊಳ್ಳಿ, ಎ. ಎಚ್. ಕುದರಿ, ಸೇವಾನಿರತ  ಹಾಗೂ ಪ್ರಗತಿ ಬಂಧು ತಂಡದ ಸದಸ್ಯರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಶ್ರೀಮತಿ. ಸರಳಾ ಶಿವಾನಂದ ಹೇರೆಕರ ಇವರು    ಬೆಳಗಾವಿ ಶ್ರೀ ಬಸವೇಶ್ವರ ಕೋ-ಆಪರೇಟಿವ್  ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆವಿಜ್ರಂಭಣಿಯಿಂದ ಜರುಗಿದ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಅಥಣಿ, ಶ್ರೀ ಸುಧಾ ಭಜನಾ ಮಂಡಳದಿಂದ ಏಕಾದಶಿ‌ ನಿಮಿತ್ಯ ಪಲ್ಲಕ್ಕಿ ಉತ್ಸವ. ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಾರ ಹುಣ್ಣಿಮೆಗೆ ಮೊದಲೇ ಸಜ್ಜುಗೊಂಡ ವೇದಿಕೆಯ ಪೂಜಾ ಕಾರ್ಯಕ್ರಮಶ್ರೀ ಖಾಸ್ಗತೇಶ್ವರ ಜಾತ್ರೋತ್ಸವ * ಎಲ್ಲಡೆ ಸಂಭ್ರಮ, ಸಡಗರದ ಮೆರಗುಜ್ಯೋತಿ ಬೆಳಗಿಸುವ ಮೂಲಕ ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್, ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ವಿಕಸಿತ್ ವೈಬ್ರಂಟ್‌ ವಿಲೇಜ್‌-2006 ವಿಶಿಷ್ಟ ಕಾರ್ಯಕ್ರಮಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ ಚುನಾವಣೆ ಸ್ವಾಸ್ಥ್ಯ ಸಂಕಲ್ಪ ಯೋಜನೆ ಕಾರ್ಯಕ್ರಮ