LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆ

ಬೆಳಗಾವಿ : ಭಾರತೀಯ ಹವಾಮಾನ ಇಲಾಖೆಯು ಮುಂದಿನ ೫ ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ.
ಮುಂದಿನ ೫ ದಿನಗಳಲ್ಲಿ ಉತ್ತರ ಕರ್ನಾಟಕದ ಬಹಳಷ್ಟು ಸ್ಥಾನಗಳಲ್ಲಿ ತಾಪಮಾನವು ೨ ರಿಂದ ೩ ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಬಹುದೆಂದು ಹವಾಮಾನ ಇಲಾಖೆ ಹೇಳಿದೆ. ಜನರು ಹಗಲು ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿಯೇ ಇರಬೇಕು, ಜನರು ಮನೆಯಿಂದ ಹೊರಗೆ ಹೋದಾಗಲೆಲ್ಲಾ ನೀರು ಅಥವಾ ದ್ರವ ಪದಾರ್ಥಗಳನ್ನು ತಮ್ಮೊಂದಿಗೆ ಒಯ್ಯುವಂತೆ ಹವಾಮಾನ ಇಲಾಖೆ ಅಧಿಕಾರಿಗಳು ಸಲಗೆ ನೀಡಿದ್ದಾರೆ.

https://twitter.com/Indiametdept/status/1773273435554083091/photo/1

ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ೨ ರಿಂದ ೩ ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಎ ಪ್ರಸಾದ್ ಖಿಓIಇಗೆ ತಿಳಿಸಿದ್ದಾರೆ. Iಒಆ ವರದಿ ಪ್ರಕಾರ, ತುಮಕೂರು, ಬಾಗಲಕೋಟೆ ಮತ್ತು ಚಿತ್ರದುರ್ಗದ ಕೆಲವು ಭಾಗಗಳಲ್ಲಿ ತಾಪಮಾನವು ೩.೧- ೫ ಡಿಗ್ರಿ ಸೆಲ್ಸಿಯಸ್ ಮತ್ತು ಮಂಡ್ಯ, ದಾವಣಗೆರೆ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ ೧.೬- ೬ ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಏಪ್ರಿಲ್‌ನಲ್ಲಿ ತಾಪಮಾನವು ಮಾರ್ಚ್‌ಗಿಂತ ಹೆಚ್ಚಾಗಿರುತ್ತದೆ.

https://twitter.com/Indiametdept/status/1773273435554083091

ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ತಾಪಮಾನದಲ್ಲಿ ಗರಿಷ್ಠ ಏರಿಕೆಯಾಗಲಿದೆ. ಉತ್ತರ ಕರ್ನಾಟಕದ ಕೆಲವು ಸ್ಥಳಗಳ್ಲಿ ಅದು ೪ ರಿಂದ ೫ ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ತಾಪಮಾನವು ೧೨ ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಗರಿಷ್ಠ ೩೫.೨ ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಆಕಾಶವು ಶುಭ್ರವಾಗಿದ್ದು ಬೇಸಿಗೆಯ ಬಿಸಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಾಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಆದರೂ ರಾಜ್ಯದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್