Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ : ವಾಹನ ಸಂಚಾರಕ್ಕೆ ಅಡ್ಡಿ

ಚಮೋಲಿ ಜುಲೈ 10: ಉತ್ತರಾಖಂಡದ  ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ  ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ  ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಜೋಶಿಮಠದ ಚುಂಗಿ ಧಾರ್‌ನಲ್ಲಿ ಬೆಟ್ಟದ ಬೃಹತ್ ಭಾಗವು ಕುಸಿದು ರಸ್ತೆಯ ಮೇಲೆ ಬೀಳುತ್ತಿರುವುದು, ದೊಡ್ಡ ಬಂಡೆಗಳು ಉರುಳಿ ಬೀಳುತ್ತಿರುವುದನ್ನು 30 ಸೆಕೆಂಡುಗಳ ವಿಡಿಯೊ ತೋರಿಸುತ್ತದೆ. ಜನರು ಭಯಭೀತರಾಗಿ ಸುರಕ್ಷಿತ ಜಾಗಕ್ಕೆ ಓಡುತ್ತಿರುವುದನ್ನು ವಿಡಿಯೊ ತೋರಿಸುತ್ತದೆ. ಅವರಲ್ಲಿ ಹಲವರು ತಮ್ಮ ಫೋನ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿಯುತ್ತಿರುವುದು ಕಂಡುಬಂದಿದೆ.

ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿದ್ದು ಭೂಕುಸಿತ ಸಂಭವಿಸಿದಾಗ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದರು. ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳನ್ನು ಕರೆಸಿ ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟಗಳಲ್ಲಿ ಭೂಕುಸಿತಗಳು ಉಂಟಾಗಿದ್ದು, ಬದರಿನಾಥಕ್ಕೆ ಹೋಗುವ ಹೆದ್ದಾರಿಯು ಕಲ್ಲುಮಣ್ಣುಗಳಿಂದ ಮುಚ್ಚಿದ್ದು ಹಲವಾರು ಸ್ಥಳಗಳಲ್ಲಿ ಸಂಚಾರ ನಿರ್ಬಂಧಿಸಲ್ಪಟ್ಟಿದೆ. ನಿರಂತರ ಮಳೆಯಿಂದಾಗಿ ಹೆಚ್ಚಿನ ಸಂಖ್ಯೆಯ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಅದೇ ವೇಳೆ ಚಂಪಾವತ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಹಲವಾರು ಗ್ರಾಮಗಳು ಭಾರೀ ಪ್ರಮಾಣದಲ್ಲಿ ಜಲಾವೃತವಾಗಿವೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ