Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆಗೆ ರಸ್ತೆಗಳು, ಚರಂಡಿಗಳು ಜಲಾವೃತ; ಅಲ್ಲಲ್ಲಿ ಮನೆಗಳಿಗೆ ನುಗ್ಗಿದ ನೀರು

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಅನೇಕ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ಶನಿವಾರ ಬೆಳಗ್ಗೆಯೂ ಕೂಡ ವರ್ಷಧಾರೆಯಾಗಿದ್ದು, ಮತ್ತೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ದೆಹಲಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್​ ಆಲರ್ಟ್​ ನೀಡಿತ್ತು. ಉತ್ತರ, ಪಶ್ಚಿಮ, ದಕ್ಷಿಣ, ಆಗ್ನೇಯ ಮತ್ತು ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಲಾಗಿತ್ತು. ಆದರೆ ಬಳಿಕ ರೆಡ್ ಅಲರ್ಟ್ ಬದಲಿಗೆ ಯೆಲ್ಲೋ ಆಲರ್ಟ್​ ಘೋಷಣೆ ಮಾಡಲಾಗಿದೆ. ಎಚ್ಚರದಿಂದ ಇರುವಂತೆ ಜನರಿಗೆ ತಿಳಿಸಲಾಗಿದೆ.


ಶನಿವಾರ ಬೆಳಗ್ಗೆ 8.30ರ ವರೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ, ದೆಹಲಿಯ ಸಫ್ದರ್ಜಂಗ್‌ನಲ್ಲಿರುವ ಪ್ರಾಥಮಿಕ ಹವಾಮಾನ ಕೇಂದ್ರದಲ್ಲಿ 78.7 ಮಿ.ಮೀ., ಪ್ರಗತಿ ಮೈದಾನದಲ್ಲಿ 100 ಮಿ.ಮೀ., ಲೋಧಿ ರಸ್ತೆ 80 ಮಿ.ಮೀ., ಪುಸಾ 69 ಮಿ.ಮೀ. ಮತ್ತು ಪಾಲಂನಲ್ಲಿ 31.8 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.

Advertisement

ಶುಕ್ರವಾರ ರಾತ್ರಿ 11ರಿಂದ ಪಂಚಕುಯಿಯಾನ್ ಮಾರ್ಗ, ಮಥುರಾ ರಸ್ತೆ, ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ಬಾಗ್, ಕಿದ್ವಾಯಿ ನಗರ ಮತ್ತು ಇತರ ಹಲವಾರು ಪ್ರದೇಶಗಳು ಸೇರಿದಂತೆ ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*