LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹಲೋ ಸರ್ ... ಹೀಗೊಂದು ಸಿನಿಮಾ 



     ಈ ಹಿಂದೆ ಮುಕ್ತಿ, ತ್ರಿಪುರ,ಆರ್ಟಿಕಲ್ 370 ಚಿತ್ರ ನಿರ್ದೇಶಿಸಿದ್ದ  ಕೆ.ಶಂಕರ್ ಅವರ ನಿರ್ದೇಶನದ   ಮತ್ತೊಂದು ಚಿತ್ರ 'ಹಲೋ ಸರ್'. ಕನ್ನಡ, ತೆಲಗು, ತಮಿಳು ಸೇರಿದಂತೆ 3 ಭಾಷೆಗಳಲ್ಲಿ ನಿರ್ಮಾಣ ವಾಗಿರುವ ಈ ಚಿತ್ರಕ್ಕೆ ಶಂಕರ್ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ರಚಿಸಿದ್ದಾರೆ.

      ಸಮಾಜದಲ್ಲಿ, ತಿಳಿದೂ ತಿಳಿದೂ,  ಅಪರಾಧ ಕೃತ್ಯ ತಪ್ಪು ಮಾಡಿ,  ತಮ್ಮ, ಹಣ ಬಲ, ಜನರ ಸಾಮರ್ಥ್ಯವನ್ನು ಬಳಸಿಕೊಂಡು, ಪ್ರಾಮಾಣಿಕರ ಹಾಗೂ ಪೊಲೀಸ್ ಮತ್ತು  ರಾಜಕಾರಣಿಗಳ ವಿರುದ್ಧ ಸಮರ ಸಾರುವ ಮತ್ತು ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ  ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಈ ಚಿತ್ರದಲ್ಲಿದೆ.ತಮ್ಮ ಹಣ, ಅಂತಸ್ತಿನ ಪ್ರಭಾವ ಬಳಸಿಕೊಂಡು ಕಾನೂನು ಉಲ್ಲಂಘಿಸಿ, ಸಮಾಜದ ವ್ಯವಸ್ಥೆಯನ್ನು ಬುಡಮೇಲು  ಮಾಡುತ್ತಿರುವವರ ವಿರುದ್ದ ಹೋರಾಡುವ ಯುವಕನ ಕಥೆಯೂ ಹೌದು.

   ಚಿತ್ರದ ನಾಯಕನಾಗಿ ರಾಜಬಾಲ ನಟಿಸಿದ್ದಾರೆ.‌ ಈಗಾಗಲೇ  ತೆಲುಗಲ್ಲಿ 7 to 4, ಚಿತ್ರಂ, ಲವ್ ಬೂಮ್, ತೊಂಗಿ ತೊಂಗಿ ಚುದಾಮುಕ್ಕು ಚಂದಮಾಮ, ಮೈತ್ರಿವಾನಂ, ಅಂತಕು ಮಿಂಚು, ಚಿತ್ರಗಳಲ್ಲಿ ನಟಿಸಿರುವ ರಾಜಬಾಲ ಅವರಿಗೆ ಕನ್ನಡದಲ್ಲಿದು ಮೊದಲ ಚಿತ್ರ, ಸ್ವಾತಿ ಲಿಂಗರಾಜ್ ಚಿತ್ರದ ನಾಯಕಿಯಾಗಿ ನಟಿಸಿದ್ದು,  ಎಸ್. ನಾರಾಯಣ್‌ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

    ಶ್ರೀ ಅಂಕುರ ಕ್ರಿಯೆಷನ್ ಬ್ಯಾನರ್ ಅಡಿ ಎಲ್. ಮಂಜುನಾಥ್,   ಹೆಚ್‌. ಪಿ.  ಮಹೇಶ್ ಮತ್ತು ವೆಂಕಟೇಶ್

ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಎಂ.ಎನ್.ಕೃಪಾಕರ್ ಅವರ ಸಂಗೀತ, ಚಂದ್ರು ಸೊಂಡೇಕೊಪ್ಪ, ಸೂರ್ಯೋದಯ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.  ಕೆ.ಶಿವಣ್ಣ, ಕಿಲ್ಲರ್ ವೆಂಕಟೇಶ್, ರಮಾನಂದ್, ಬೇಬಿ ಎಸ್ ಪವಿತ್ರ, ಉಳಿದ ತಾರಾಗಣದಲ್ಲಿದ್ದಾರೆ. ಮಂಗಳೂರು, ಮಂಡ್ಯ, ಬೆಂಗಳೂರು, ಮತ್ತು ಹೈದರಾಬಾದ್ ಸುತ್ತಮುತ್ತ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಸದ್ಯ  ಚಿತ್ರವೀಗ  ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.  ಆಗಸ್ಟ್ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ