ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣ, ಸುಜಾತ್ ಭಟ್, ಸಮೀರ್ನಿಂದ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಕೆಲವು ದಿನಗಳ ಹಿಂದೆ ದೂರು ನೀಡಿದ್ದರು. ಹೀಗಾಗಿ ಎಸ್ಐಟಿ ಸ್ನೇಹಮಯಿಗೂ ಬುಲಾವ್ ಕೊಟ್ಟು ಸೋಮವಾರ ವಿಚಾರಣೆ ನಡೆಸಿದೆ. ಬಳಿಕ ಮಾತನಾಡಿರುವ ಸ್ನೇಹಿಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಸೌಜನ್ಯಳ ಮೇಲೆ ಅತ್ಯಾಚಾರವೆಸಗಿ ಕೊಂದಿರುವುದು ಬೇರೆ ಯಾರೂ ಅಲ್ಲ, ಆಕೆಯ ಮಾವ ವಿಠ್ಠಲ ಗೌಡ ಎಂದು ಆರೋಪಿಸಿದ್ದಾರೆ.
ಸದ್ಯ ಹೀಗೆ ಆರೋಪಿಸಿರುವ ಸ್ನೇಹಮಯಿ ಕೃಷ್ಣ ತಮ್ಮ ಬಳಿರುವ ಮಾಹಿತಿ, ಸಾಕ್ಷ್ಯ ಸಮೇತ ಎಸ್ಪಿಗೆ ದೂರು ಕೊಡಲು ನಿರ್ಧರಿಸಿದ್ದು, ಸೌಜನ್ಯ ಸಾವಿನ ಪ್ರಕರಣದ ಮರು ತನಿಖೆಯೂ ಆಗಬೇಕು ಎಂದಿದ್ದಾರೆ.
