ಕಾಗವಾಡ,ಜೂ,೦೧
"ನಾನಾಗಿ ಯಾರ ಬಳಿಯೂ ಮಂತ್ರಿ ಸ್ಥಾನ ಕೇಳುವುದಿಲ್ಲ. ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ನನ್ನ ಶಕ್ತಿ ಗಮನಿಸಿ ಸಚಿವಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ" ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಲ್ಲಾ ಶಾಸಕರು ಸಚಿವಸ್ಥಾನ ಕೇಳುತ್ತಿದ್ದಾರೆ, ಆದರೆ ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ನನಗೆ ಮಂತ್ರಿ ಸ್ಥಾನ ಕೊಟ್ಟರೂ ಸಂತೋಷ, ಕೊಡದಿದ್ದರೂ ಸಂತೋಷದಿಂದ ಇರುತ್ತೇನೆ" ಎಂದರು.
ಇದೇ ವೇಳೆ, ಶನಿವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಗೆ ಗೈರಾದ ಕುರಿತು ಸ್ಪಷ್ಟನೆ ನೀಡಿದ ಅವರು, "ಅನಾರೋಗ್ಯದ ಹಿನ್ನೆಲೆಯಲ್ಲಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರ ಬರೆದಿದ್ದೇನೆ. ಮುಂದಿನ ಹತ್ತು ದಿನಗಳ ಬಳಿಕ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದೇನೆ" ಎಂದು ತಿಳಿಸಿದರು.
