Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸಲಹೆ

ಬೆಂಗಳೂರು: ಪರವಾನಿಗೆ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಪೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪ ಸಂಬಂಧ, ತಮ್ಮನ್ನು ಪ್ರಕರಣದಿಂದ ಕೈ ಬಿಡಲು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಹೈಕೋರ್ಟ್ ಸೂಚಿಸಿದೆ.


ಬೆಳ್ತಂಗಡಿ ಠಾಣಾ ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್​ಗಳನ್ನು ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠವು ಈ ಸೂಚನೆ ನೀಡಿ ಅರ್ಜಿಗಳನ್ನು ಇತ್ಯರ್ಥಪಡಿಸಿದೆ.


ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಶಾಸಕ ಪೂಂಜಾ ವಿರುದ್ಧ ಈಗಾಗಲೇ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ಕೋರ್ಟ್) ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.


ಈ ಅಂಶ ದಾಖಲಿಸಿಕೊಂಡ ಪೀಠ ಈ ಸೂಚನೆ ನೀಡಿ ಆದೇಶಿಸಿದೆ. ದೋಷಾರೋಪ ಪಟ್ಟಿ ಸಲ್ಲಿಸಿರುವುದರಿಂದ ಆರೋಪಗಳನ್ನು ಕೈ ಬಿಡಲು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಅರ್ಜಿ ಸಲ್ಲಿಸಲಿ. ನ್ಯಾಯಾಲಯವು ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಸೂಚಿಸಿದ ನ್ಯಾಯಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ