Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿನಯ್​ ಕುಲಕರ್ಣಿಗೆ ಮತ ಚಲಾಯಿಸಲು ಹೈಕೋರ್ಟ್ ಅನುಮತಿ:

ಧಾರವಾಡ, ಮೇ.07: ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್ ಕುಲಕರ್ಣಿಗೆ  ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದ್ದು, ಇಂದು ಕುಟುಂಬ ಸಮೇತ ನಗರದ ಶಾರದಾ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 75 ಕ್ಕೆ ಬಂದು ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು,‘ ನಾಲ್ಕು ವರ್ಷಗಳ‌ ಬಳಿಕ ಧಾರವಾಡಕ್ಕ ಬಂದಿದ್ದು ಸಂತೋಷ ಆಗಿದೆ. ಅಷ್ಟೇ ನೋವು ಕೂಡ ಇದೆ. ಇವತ್ತು ಹೈಕೋರ್ಟ್ ಮತದಾನಕ್ಕೆ ಅವಕಾಶ‌ ಕೊಟ್ಟಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು, ಉಚ್ಚ ನ್ಯಾಯಾಲಯಕ್ಕೆ ಅಭಿನಂದನೆ ಸಲ್ಲಿಸಿವೆ ಎಂದರು.

ಇನ್ನು ನನ್ನ ಎಲೆಕ್ಷನ್​ಗೆ ನಾಮಪತ್ರ ಸಲ್ಲಿಸಲು ಜೊತೆಗೆ ಮತದಾನಕ್ಕೂ ಅವಕಾಶ ಆಗಿರಲಿಲ್ಲ. ಆದರೆ ಈಗ ವಿನೋದ ಅಸೂಟಿಗೆ ಮತ ಹಾಕಲು ಅವಕಾಶ ಸಿಕ್ಕಿದೆ. ನಿಜವಾಗಿಯೂ ಬಹಳ ಸಂತೋಷ ಆಗಿದೆ. ಹಲವಾರು ಕಾರ್ಯಕರ್ತರಿಗೆ ನಾನು ಬರೋದು ಮಾಧ್ಯಮಗಳಿಂದ ತಿಳಿದಿದೆ. ಹೀಗಾಗಿ ಕಾರ್ಯಕರ್ತರೂ ಸಹ ಬಂದಿದ್ದಾರೆ. ಇದಕ್ಕಾಗಿ ಮಾಧ್ಯಮಗಳಿಗೆ ಅಭಿನಂದನೆ ಹೇಳುವೆ. ಕಾರ್ಯಕರ್ತರಲ್ಲಿ ಸಹಜವಾಗಿ ಜೋಶ್ ಕಾಣುತ್ತಿದೆ. 25 ವರ್ಷದಿಂದ ನಾನು ರಾಜಕೀಯಲ್ಲಿದ್ದೇನೆ. ಸಾರ್ವಜನಿಕ ಕ್ಷೇತ್ರದಲ್ಲಿ ಎಲ್ಲ ರಂಗದಲ್ಲಿ ಕೆಲಸ ಮಾಡಿದ್ದೇನೆ. ನಾನು ಕ್ಷೇತ್ರದಲ್ಲಿ ಇರಲಿಲ್ಲ, ಆದರೂ ಅಭಿಮಾನಿಗಳು ಆರಿಸಿ ಕಳುಹಿಸಿದ್ದಾರೆ. ಇದು ಕರ್ನಾಟಕದಲ್ಲಿ ಮಾದರಿ ಆಗಿತ್ತು. ನಾನು ಕ್ಷೇತ್ರಕ್ಕೆ ಬರದಿದ್ದರೂ ಚುನಾಯಿತ ಆಗಿದ್ದೇನೆ ಎಂದರು.

ಇದೇ ವೇಳೆ ಮತದಾನಕ್ಕೆ ಅವಕಾಶ ಸಿಕ್ಕ ವಿಚಾರ, ‘ಇದರಿಂದಲೇ ಕಾಂಗ್ರೆಸ್ ಗೆಲವು ಖಚಿತ ಅನ್ನೋದು ಗೋಚರ ಆಗುತ್ತಿದೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಧಾರವಾಡ ಈಗಾಗಲೇ ನಾವು ಗೆದ್ದಾಗಿದೆ. ಲಿಂಗಾಯತರು ಈ ಸಲವೂ ನಮ್ಮ ಕೈ ಹಿಡಿದಿದ್ದಾರೆ. ಮತದಾರರು ಕಾಂಗ್ರೆಸ್ ಪರ ಒಲವು ತೋರಿದ್ದಾರೆ. ಇನ್ನು ಎಲ್ಲಿಯೂ ಭೇಟಿ ನೀಡಿಲ್ಲ. ಮತ ಹಾಕಿ ಬನ್ನಿ ಎಂದು ಅಷ್ಟೇ ಕೋರ್ಟ್ ಹೇಳಿದೆ. ಮತ ಚಲಾಯಿಸಿ ವಾಪಸ್ ಹೋಗುವೆ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ