Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಮಗಾರಿ ಗುತ್ತಿಗೆ ಅಸ್ತಿತ್ವದಲ್ಲಿದ್ದರೆ ಗ್ರಾಮ ಪಂಚಾಯತಿ ಸದಸ್ಯತ್ವ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು,11: ಗ್ರಾಮ ಪಂಚಾಯತಿ ಸದಸ್ಯರು ಪಂಚಾಯತಿಗೆ ಸಂಬಂಧಿಸಿದಂತೆ ಪಡೆದಿರುವ ಕಾಮಗಾರಿ ಗುತ್ತಿಗೆ (ಒಪ್ಪಂದ) ಅಸ್ತಿತ್ವದಲ್ಲಿದ್ದರೆ ಮಾತ್ರ ಅವರ ಸದಸ್ಯತ್ವ ರದ್ದುಪಡಿಸಲು ಕಾರಣವಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.


ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಬೀರುಹಳ್ಳಿ ಗ್ರಾಮ ಪಂಚಾಯತಿಯ ಗುತ್ತಿಗೆ ಕಾಮಗಾರಿ ಕೆಲಸ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಅದೇ ಗ್ರಾಪಂ ಸದಸ್ಯ ಬಿ.ಎನ್.ಕುಮಾರ್ ಅವರನ್ನು ಅನರ್ಹಗೊಳಿಸಬೇಕೆಂದು ಕೋರಿ ಅದೇ ಗ್ರಾಮದ ನಿವಾಸಿ ಬಿ.ಟಿ. ಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಎಸ್. ಸುನೀಲ್ ದತ್ತ ಯಾದವ್ ಅವರ ಪೀಠ ಆದೇಶಿಸಿದೆ.


ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ- 1993ರ ಸೆಕ್ಷನ್ 12 (ಹೆಚ್) ಪ್ರಕಾರ ಗ್ರಾ.ಪಂ ಸದಸ್ಯರು, ಅವರ ಪಂಚಾಯತಿಗೆ ಸೇರಿದ ಕಾಮಗಾರಿಗಳು ಗುತ್ತಿಗೆ ಪಡೆದು, ಆ ಗುತ್ತಿಗೆ ಒಪ್ಪಂದ ಅಸ್ತಿತ್ವದಲ್ಲಿ ಇದ್ದರೆ ಮಾತ್ರ ಸದಸ್ಯತ್ವ ಅನರ್ಹಗೊಳಿಸಲು ಕಾರಣವಾಗುವುದು. ಅದು ಬಿಟ್ಟು ಹಿಂದಿನ ವರ್ಷದ ಕಾಮಗಾರಿಗಳು ಅಂದರೆ ಅವರು ಸದಸ್ಯರಾಗುವ ಮುನ್ನ ಕಾಮಗಾರಿಗಳು ನಡೆಸಿ, ಅದನ್ನು ಪೂರ್ಣಗೊಳಿಸಿದ್ದರೆ, ಅದರ ಆಧಾರದ ಮೇಲೆ ಸದಸ್ಯತ್ವ ರದ್ದುಪಡಿಸಲು ಸಾಧ್ಯವಿಲ್ಲ. ಅಧೀನ ನ್ಯಾಯಾಲಯವು ಸಹ ಇದೇ ವ್ಯಾಖ್ಯಾನ ಮಾಡಿ, ಬಿ.ಎನ್. ಕುಮಾರ್ ಅವರ ಅನರ್ಹತೆ ಕೋರಿ ಅರ್ಜಿದಾರರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ, ಅದರ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯ ಕಂಡುಬರುತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ