LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಮಗಾರಿ ಗುತ್ತಿಗೆ ಅಸ್ತಿತ್ವದಲ್ಲಿದ್ದರೆ ಗ್ರಾಮ ಪಂಚಾಯತಿ ಸದಸ್ಯತ್ವ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು,11: ಗ್ರಾಮ ಪಂಚಾಯತಿ ಸದಸ್ಯರು ಪಂಚಾಯತಿಗೆ ಸಂಬಂಧಿಸಿದಂತೆ ಪಡೆದಿರುವ ಕಾಮಗಾರಿ ಗುತ್ತಿಗೆ (ಒಪ್ಪಂದ) ಅಸ್ತಿತ್ವದಲ್ಲಿದ್ದರೆ ಮಾತ್ರ ಅವರ ಸದಸ್ಯತ್ವ ರದ್ದುಪಡಿಸಲು ಕಾರಣವಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.


ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಬೀರುಹಳ್ಳಿ ಗ್ರಾಮ ಪಂಚಾಯತಿಯ ಗುತ್ತಿಗೆ ಕಾಮಗಾರಿ ಕೆಲಸ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಅದೇ ಗ್ರಾಪಂ ಸದಸ್ಯ ಬಿ.ಎನ್.ಕುಮಾರ್ ಅವರನ್ನು ಅನರ್ಹಗೊಳಿಸಬೇಕೆಂದು ಕೋರಿ ಅದೇ ಗ್ರಾಮದ ನಿವಾಸಿ ಬಿ.ಟಿ. ಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಎಸ್. ಸುನೀಲ್ ದತ್ತ ಯಾದವ್ ಅವರ ಪೀಠ ಆದೇಶಿಸಿದೆ.


ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ- 1993ರ ಸೆಕ್ಷನ್ 12 (ಹೆಚ್) ಪ್ರಕಾರ ಗ್ರಾ.ಪಂ ಸದಸ್ಯರು, ಅವರ ಪಂಚಾಯತಿಗೆ ಸೇರಿದ ಕಾಮಗಾರಿಗಳು ಗುತ್ತಿಗೆ ಪಡೆದು, ಆ ಗುತ್ತಿಗೆ ಒಪ್ಪಂದ ಅಸ್ತಿತ್ವದಲ್ಲಿ ಇದ್ದರೆ ಮಾತ್ರ ಸದಸ್ಯತ್ವ ಅನರ್ಹಗೊಳಿಸಲು ಕಾರಣವಾಗುವುದು. ಅದು ಬಿಟ್ಟು ಹಿಂದಿನ ವರ್ಷದ ಕಾಮಗಾರಿಗಳು ಅಂದರೆ ಅವರು ಸದಸ್ಯರಾಗುವ ಮುನ್ನ ಕಾಮಗಾರಿಗಳು ನಡೆಸಿ, ಅದನ್ನು ಪೂರ್ಣಗೊಳಿಸಿದ್ದರೆ, ಅದರ ಆಧಾರದ ಮೇಲೆ ಸದಸ್ಯತ್ವ ರದ್ದುಪಡಿಸಲು ಸಾಧ್ಯವಿಲ್ಲ. ಅಧೀನ ನ್ಯಾಯಾಲಯವು ಸಹ ಇದೇ ವ್ಯಾಖ್ಯಾನ ಮಾಡಿ, ಬಿ.ಎನ್. ಕುಮಾರ್ ಅವರ ಅನರ್ಹತೆ ಕೋರಿ ಅರ್ಜಿದಾರರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ, ಅದರ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯ ಕಂಡುಬರುತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್