Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ: ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ರದ್ದು

*ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ


*ವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿ, ಈಗ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ 


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆ ನಡೆಸಿದರು.


ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮುಖ್ಯಾಂಶಗಳು:


•ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ


•ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.


•ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.

• ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.


*ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು.


•1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.


•ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.


• ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.


• ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.


• ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಪ್ರಕಾಶ್ ರಾಜ್ ಅವರು ಹೇಳಿದರು.


• ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ