Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಃಖ, ಶಾಂತಿ, ಸಂಪತ್ತು, ನೆಮ್ಮದಿ ನೀಡುವ ಮೂಲಕ  ದೇಶದಲ್ಲಿ ಎಲ್ಲಾರೂ  ಸೌಹಾರ್ದತೆ,ಯಿಂದ ಭಾಳಬೇಕಿದೆ. ::  ಹೆಚ್.ಎನ್. ಮೊಹಮ್ಮದ ಇಮಾಮ್ ನಿಯಾಜಿ






ಹೊಸಪೇಟೆ : ನಗರದ ಹಳೆಯ ಐ ಎಸ್‌ಅರ್ ರಸ್ತೆಯಲ್ಲಿ ನ ಇದ್ಗಾ ದಲ್ಲಿ‌  ರಂಜಾನ್  ಹಬ್ಬವನ್ನು ಮುಸ್ಲಿಂ ಬಾಂಧವರು  ಸಂಭ್ರಮ ಮತ್ತು ಸಹೋದರತೆಯಿಂದ ಆಚರಿಸಿದರು. 

 

ನಗರದ  ವಿವಿಧ ಪ್ರದೇಶಗಳಿಂದ   ಸಾವಿರಾರು ಮುಸ್ಲಿಂ ಬಾಂಧವರು ಅಂಬೇಡ್ಕರ್ ಸರ್ಕಲ್ ಹತ್ತಿರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಂದುಗಳು ಹೊಸ ಬಟ್ಟೆ ಧರಿಸಿ, ದಾನ (ಫಿತರ್ ಝಕಾತ್) ನೀಡಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು,

ನಂತರ ಪರಸ್ಪರ ಅಲಂಗಿಸುವ ಮೂಲಕ ಹಬ್ಬದ  ಶುಭಾಶಗಳನ್ನು ತಿಳಿಸಿದರು,

 

 ಈದ್ಗಾ ಮೈದಾನದಲ್ಲಿ ಪ್ರಾರ್ಥನೆಯ ನಂತರ  ಹಬ್ಬವನ್ನು ಉದ್ದೇಶಿಸಿ ಹೊಸಪೇಟೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗು ಹೊಸಪೇಟೆ ಅಂಜುಮನ್ ಖಿದ್ಮತೆ ಇಸ್ಲಾಂ ಸಮಿತಿಯ ಅಧ್ಯಕ್ಷರಾದ   ಹೆಚ್.ಎನ್. ಮೊಹಮ್ಮದ ಇಮಾಮ್ ನಿಯಾಜಿ ರವರು ಮಾತನಾಡಿ ಎಲ್ಲಾ ಮುಸ್ಲಿಂ ಬಾಂಧವರು 3೦ ದಿನಗಳ ಉಪವಾಸವನ್ನು ಪೂರೈಸಿದ ನಂತರ ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇವೆ ಎಂಬ ಪ್ರತೀಜ್ಞೆಯನ್ನು ಮಾಡುವ ಮೂಲಕ ಈ ಒಂದು ರಂಜಾನ್ ಹಬ್ಬದಂದು ಸಾಮೂಹಿಕ ಪ್ರಾರ್ಥನೆಯನ್ನು ಭಗವಂತನಿಗೆ ಸಲ್ಲಿಸಿರುತ್ತೇವೆ, 

 

ಈ ವರ್ಷದ ರಂಜಾನ್ ಹಬ್ಬವು ನಮ್ಮ ದೇಶದ  ಪ್ರತಿಯೊಬ್ಬರಿಗೂ ಸುಃಖ, ಶಾಂತಿ, ಸಂಪತ್ತು, ನೆಮ್ಮದಿ ನೀಡುವ ಮೂಲಕ  ದೇಶದಲ್ಲಿ ಎಲ್ಲಾರೂ  ಸೌಹಾರ್ದತೆ,  ಸಹೋದರ ವಾತ್ಸಲ್ಯದಿಂದ ಕೂಡಿ ಬಾಳಬೇಕು ಎಂದು  ಭಗವಂತನಲ್ಲಿ ಪ್ರಾರ್ಥಿಸುತ್ತಾ ಸಮಸ್ತ ನಾಡಿನ ಎಲ್ಲಾ ಜನತೆಗೆ ರಂಜಾನ್  (ಈದ್- ಉಲ್- ಫಿತರ್) ಹಬ್ಬದ ಹಾರ್ಧಿಕ ಶುಭಾಶಯಗಳನ್ನು ತಿಳಿಸಿದರು.

 

 ನಂತರ ಅಂಜುಮನ್ ಸಂಸ್ಥೆಯ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿದರು.

 

ನಗರದಲ್ಲಿ  ಸಮಸ್ತ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಗಳನ್ನು ಕೋರಿದರು. 

 

ನಗರದ ಆರ್.ಟಿ.ಓ. ಅಫೀಸ್ ಹಿಂಭಾಗದ ಈದ್ಗಾ ಮೈದಾನ, ಬಸ್ ಡಿಪೋ ಹತ್ತಿರ ಈದ್ಗಾ ಮೈದಾನ,  ಗುಲಾಬ್ ಷಾ ವಲಿ ದರ್ಗ ಈದ್ಗಾ ಮೈದಾನ,  ಚಿತ್ತವಾಡ್ಗಿ ಈದ್ಗಾ ಮೈದಾನ, ಕಾರಿಗನೂರು ಈದ್ಗಾ ಮೈದಾನ,  ನಾಗೇನಹಳ್ಳಿ ಈದ್ಗಾ ಮೈದಾನ , ಟಿ.ಬಿ. ಡ್ಯಾಮ್ ಈದ್  ವಿವಿಧೆಡೆ ಪ್ರಾರ್ಥನೆ ಸಲ್ಲಿಸಿದರು.

 

ಪ್ರಾರ್ಥನೆಯ ವೇಳೆ  ಅಂಜುಮನ್ ಕಮಿಟಿ ಉಪಾಧ್ಯಕ್ಷರಾದ ಎಮ್.ಎಮ್. ಫೈರೋಜ್ ಖಾನ್, ಕಾರ್ಯದರ್ಶಿಯಾದ ಅಬೂಬಕ್ಕರ್ ಅಶ್ರಫಿ, ಖಜಾಂಚಿಯಾದ ಅನ್ಸರ್ ಭಾಷ, ಜಂಟಿ ಕಾರ್ಯದರ್ಶಿಯಾದ ಡಾ|| ದುರ್ವೆಶ್ ಮೈನುದ್ದೀನ್, ಸದ್ಯಸರಾದ ಸದ್ದಮ್ ಹುಸೇನ್, ಮೊಹಮ್ಮದ್ ಮೋಸಿನ್, ಗುಲಾಮ್ ರಸೂಲ್, ಸಮಾಜದ ಮುಖಂಡರಾದ, ಖಲಂದರ್, ಗೌಸ್, ಸಮಾಜದ ಹಿರಿಯ ಮುಖಂಡರು ಹಾಗು ಸಾವಿರಾರು ಮುಸ್ಲಿಂ ಭಾಂದವರು  ಭಾಗವಹಿಸಿದರು.

 

ಒಂದು ತಿಂಗಳ ಕಠಿಣ ಉಪವಾಸದ (ರೋಜಾ) ನಂತರ, ಚಂದ್ರದರ್ಶನದೊಂದಿಗೆ ಮಸೀದಿಗಳಲ್ಲಿ ಸಾಮೂಹಿಕ ನಮಾಜ್, ವಿಶೇಷ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಈದ್ ಮುಬಾರಕ್ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬ ಆಚರಿಸಲಾಗುತ್ತದೆ. 


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ