LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

‘ಹರ್ ಘರ್ ತಿರಂಗ ಯಾತ್ರೆ’ಗೆ ಇಂದು ಗೃಹ ಸಚಿವ ಅಮಿತ್ ಶಾ ಚಾಲನೆ

ನವದೆಹಲಿ: ಹರ್ ಘರ್ ತಿರಂಗ ಅಭಿಯಾನ ಈಗಾಗಲೇ ಶುರುವಾಗಿದೆ. ಆಗಸ್ಟ್ 11ರಿಂದ ಆರಂಭವಾಗಿರುವ ಈ ಅಭಿಯಾನದ ಭಾಗವಾಗಿ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ನಡೆಸುತ್ತಿದೆ. ಹಾಗೇ, ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಯುದ್ಧ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್​ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹರ್ ಘರ್ ತಿರಂಗ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಆಯೋಜಿಸಿರುವ ಈ ಕಾರ್ಯಕ್ರಮವು ಭಾರತದ ಧ್ವಜದ ಪ್ರದರ್ಶನದ ಮೂಲಕ ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅಹಮದಾಬಾದ್‌ನ ವಿರಾಟ್‌ನಗರ ಪ್ರದೇಶದಲ್ಲಿ ಇಂದು ಸಂಜೆ 4.30ರಿಂದ ಈ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 14ರಂದು ವಿಭಜನೆಯ ಸ್ಮರಣಾರ್ಥ ದಿನವನ್ನು ಎಲ್ಲಾ ಜಿಲ್ಲೆಗಳಲ್ಲಿ ಮೌನ ಮೆರವಣಿಗೆಯೊಂದಿಗೆ ಆಚರಿಸಲಾಗುವುದು.

ದೇಶಭಕ್ತಿ ಮತ್ತು ರಾಷ್ಟ್ರೀಯ ಗುರುತಿನ ಪ್ರಜ್ಞೆಯನ್ನು ಬಲಪಡಿಸುವ ಮೂಲಕ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸುವ ವಿಶಾಲ ಅಭಿಯಾನದ ಉಪಕ್ರಮದ ಭಾಗವಾಗಿರುವ ಅಭಿಯಾನವನ್ನು ಅಮಿತ್ ಶಾ ಇಂದು ಉದ್ಘಾಟಿಸಲಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನವನ್ನು ಆರಂಭಿಸಿರುವ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆಗಳು ಸಿಗುತ್ತಿವೆ.

ಈ ಅವಧಿಯಲ್ಲಿ ಕೇಂದ್ರ ಸರ್ಕಾರವು ಪ್ರತಿ ಮನೆ, ಅಂಗಡಿ ಮತ್ತು ಕಚೇರಿಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಮೋದಿ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಕ್ಷದ ‘ಹರ್ ಘರ್ ತಿರಂಗ’ ಅಭಿಯಾನದ ಅಂಗವಾಗಿ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಮನ್ ಕಿ ಬಾತ್​ನಲ್ಲಿ ನಾಗರಿಕರಿಗೆ ಮನವಿ ಮಾಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್