Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಹರ್ ಘರ್ ತಿರಂಗ ಯಾತ್ರೆ’ಗೆ ಇಂದು ಗೃಹ ಸಚಿವ ಅಮಿತ್ ಶಾ ಚಾಲನೆ

ನವದೆಹಲಿ: ಹರ್ ಘರ್ ತಿರಂಗ ಅಭಿಯಾನ ಈಗಾಗಲೇ ಶುರುವಾಗಿದೆ. ಆಗಸ್ಟ್ 11ರಿಂದ ಆರಂಭವಾಗಿರುವ ಈ ಅಭಿಯಾನದ ಭಾಗವಾಗಿ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ನಡೆಸುತ್ತಿದೆ. ಹಾಗೇ, ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಯುದ್ಧ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್​ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹರ್ ಘರ್ ತಿರಂಗ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಆಯೋಜಿಸಿರುವ ಈ ಕಾರ್ಯಕ್ರಮವು ಭಾರತದ ಧ್ವಜದ ಪ್ರದರ್ಶನದ ಮೂಲಕ ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅಹಮದಾಬಾದ್‌ನ ವಿರಾಟ್‌ನಗರ ಪ್ರದೇಶದಲ್ಲಿ ಇಂದು ಸಂಜೆ 4.30ರಿಂದ ಈ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 14ರಂದು ವಿಭಜನೆಯ ಸ್ಮರಣಾರ್ಥ ದಿನವನ್ನು ಎಲ್ಲಾ ಜಿಲ್ಲೆಗಳಲ್ಲಿ ಮೌನ ಮೆರವಣಿಗೆಯೊಂದಿಗೆ ಆಚರಿಸಲಾಗುವುದು.

ದೇಶಭಕ್ತಿ ಮತ್ತು ರಾಷ್ಟ್ರೀಯ ಗುರುತಿನ ಪ್ರಜ್ಞೆಯನ್ನು ಬಲಪಡಿಸುವ ಮೂಲಕ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸುವ ವಿಶಾಲ ಅಭಿಯಾನದ ಉಪಕ್ರಮದ ಭಾಗವಾಗಿರುವ ಅಭಿಯಾನವನ್ನು ಅಮಿತ್ ಶಾ ಇಂದು ಉದ್ಘಾಟಿಸಲಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನವನ್ನು ಆರಂಭಿಸಿರುವ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆಗಳು ಸಿಗುತ್ತಿವೆ.

ಈ ಅವಧಿಯಲ್ಲಿ ಕೇಂದ್ರ ಸರ್ಕಾರವು ಪ್ರತಿ ಮನೆ, ಅಂಗಡಿ ಮತ್ತು ಕಚೇರಿಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಮೋದಿ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಕ್ಷದ ‘ಹರ್ ಘರ್ ತಿರಂಗ’ ಅಭಿಯಾನದ ಅಂಗವಾಗಿ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಮನ್ ಕಿ ಬಾತ್​ನಲ್ಲಿ ನಾಗರಿಕರಿಗೆ ಮನವಿ ಮಾಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ