Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆನ್ ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದು: ಗೃಹ ಸಚಿವ ಜಿ. ಪರಮೇಶ್ವರ

ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು.

ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ ಅಪರಾಧ ತನಿಖೆಗಳಿಗೆ ತಕ್ಕಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಯಾವುದೇ ಸೈಬರ್ ಅಪರಾಧವಾದರೆ ಹೊಸ ಕಾನೂನುಗಳನ್ವಯ ತನಿಖೆ ನಡೆಸಬೇಕಾಗುತ್ತದೆ ಎಂದರು.

ಪ್ರತಿ ಜಿಲ್ಲೆಗೊಂದರಂತೆ ರಾಜ್ಯದಲ್ಲಿ ಒಟ್ಟು 43 ಸೆನ್ ಪೊಲೀಸ್ ಠಾಣೆಗಳಿದ್ದು, ಸದ್ಯ ಡಿವೈಎಸ್ಪಿ ಅಧಿಕಾರಿಗಳು ಇರುತ್ತಾರೆ. ಮುಂದಿನ ದಿನಗಳಲ್ಲಿ ಎಸ್.ಪಿ ರ್ಯಾಂಕ್ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ತಿಳಿಸಿದರು. ಸೆನ್ ಠಾಣೆಯ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ವಿಶೇಷ ರೀತಿಯ ತರಬೇತಿಗಳನ್ನು ರೂಪಿಸಲಾಗುವುದು. ಈ ಹಿನ್ನಲೆಯಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ರಾಜ್ಯದ ಪೊಲೀಸ್ ಇಲಾಖೆಗೆ ಹೆಚ್ಚು ಉಪಯೋಗವಾಗಲಿದೆ ಎಂದರು.

ದಿನೇ ದಿನೇ ಅಪರಾಧಗಳ ರೂಪರೇಷೆ ಬದಲಾಗುತ್ತಿದೆ. ತನಿಖೆಯ ಮಾರ್ಗಗಳು ಸಹ ಬದಲಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದಲ್ಲಿ ಪ್ರತ್ಯೇಕ ತರಬೇತಿ ನೀಡಿದಂತೆ ಸೆನ್ ಠಾಣೆ ಸಿಬ್ಬಂದಿಗಳಿಗೆ ಪ್ರತ್ಯೇಕ ತರಬೇತಿ ನೀಡಲಾಗುವುದೆಂದು ಸಚಿವರು ತಿಳಿಸಿದರು.

ಸೈಬರ್ ಕ್ರೈಂಗಳಿಗೆ ಯಾವುದೇ ಅಡೆತಡೆ ಇಲ್ಲದೇ ವಿಶ್ವವ್ಯಾಪಿಯಾಗಿವೆ. ಗುಜರಾತನಲ್ಲಿ ಸೈಬರ್ ವಿಶ್ವ ವಿದ್ಯಾಲಯ ನಿರ್ಮಿಸಲಾಗಿದ್ದು ವಿವಿಧ ದೇಶಗಳಿಂದ ಬಂದು ತರಬೇತಿ ಪಡೆಯುತ್ತಿದ್ದಾರೆ. ಇದರ ಭಾಗವಾಗಿ ಧಾರವಾಡದಲ್ಲಿ ವಿಧಿ ವಿಜ್ಞಾನ ಸಂಸ್ಥೆ ಸ್ಥಾಪಿಸಲಾಗಿದ್ದು ರಾಜ್ಯದ ಪೊಲೀಸ್ ಇಲಾಖೆಗೆ ಆಧುನಿಕ ವಿಧಿ ವಿಜ್ಞಾನವು ಅತೀ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆಯೆಂದರು.

ಡ್ರಗ್ಸ ವಿರುದ್ಧ ಸಮರ: ರಾಜ್ಯ ಸರಕಾರವು ಡ್ರಗ್ಸ ವಿರುದ್ಧ ಸಮರ ಸಾರಿದ್ದು ಸ್ವತಃ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಈ ಬಗ್ಗೆ ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಳೆದೊಂದು ವರ್ಷದಲ್ಲಿ 150 ಕೋಟಿ ರೂ. ಡ್ರಗ್ಸ ಬರುತ್ತಿದ್ದು ಸಾಕಷ್ಟು ಎಚ್ಚರದ ಕ್ರಮಗಳನ್ನು ವಹಿಸಲಾಗುತ್ತಿದೆ. ಈಗಾಗಲೇ ಹೈಡ್ರೊ ಗಾಂಜಾ ಎಲ್ಲೆಂದರಲ್ಲಿ ನಾಲ್ಕು ಕೋಣೆಗಳಲ್ಲಿ ಬೆಳೆಯಲಾಗುತ್ತಿದ್ದು ಇದನ್ನು ಕಂಡು ಹಿಡಿಯುವುದು ಸವಾಲಾಗಿದೆಯೆಂದರು. ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಕಳೆದೊಂದು ವರ್ಷದಲ್ಲಿ ಡ್ರಗ್ಸ ಧಂದೆಯಲ್ಲಿ ತೊಡಗಿದ ನೂರಾರು ವಿದ್ಯಾರ್ಥಿಗಳನ್ನು ಅವರವರ ದೇಶಕ್ಕೆ ವಾಪಸ್ ಕಳಸಲಾಗಿದೆಂದು ತಿಳಿಸಿದರು.

ಪ್ರಯೋಗಾಲಯ ಹಾಗೂ ಪ್ರಾತ್ಯಕ್ಷಿಕೆಗಳನ್ನು ಸಚಿವರು ವೀಕ್ಷಿಸಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಬೆಳಗಾವಿ ವಿಭಾಗದ ಐಜಿಪಿ ವಿಕಾಸಕುಮಾರ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ