Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರು ಎಲ್‌ಇಟಿ ಉಗ್ರರ ಮನೆಗಳು ನೆಲಸಮ


ಶ್ರೀನಗರ (ಜಮ್ಮು ಕಾಶ್ಮೀರ): ಪಹಲ್ಗಾಮ್ ದಾಳಿಯಲ್ಲಿ ಸ್ಥಳೀಯ ಕುದುರೆ ಸವಾರ ಸೇರಿದಂತೆ 26 ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ ಬಳಿಕ ಮಹತ್ವದ ಬೆಳವಣಿಗೆಯಲ್ಲಿ, ದಕ್ಷಿಣ ಕಾಶ್ಮೀರದ ಟ್ರಾಲ್ ಮತ್ತು ಬಿಜ್‌ಬೆರಾ ಪ್ರದೇಶದಲ್ಲಿನ ಇಬ್ಬರು ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರ ಮನೆಗಳನ್ನು ಅಧಿಕಾರಿಗಳು ಶುಕ್ರವಾರ ನೆಲಸಮ ಮಾಡಿದ್ದಾರೆ.


ಬೈಸರನ್ ಪಹಲ್ಗಾಮ್ ದಾಳಿಯಲ್ಲಿ ಪ್ರಮುಖ ಪಾತ್ರವಿರುವ ಆರೋಪದ ಹಿನ್ನೆಲೆಯಲ್ಲಿ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನಲ್ಲಿರುವ ಆಸಿಫ್ ಶೇಖ್ ಮತ್ತು ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆರಾದಲ್ಲಿರುವ ಆದಿಲ್ ಥೋಕರ್ ಅವರ ಮನೆಗಳನ್ನು ಸ್ಫೋಟಿಸಿ, ನೆಲಸಮ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


ಮಂಗಳವಾರ ಪಹಲ್ಗಾಮ್‌ನ ಬೈಸರನ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಹಲ್ಗಾಮ್‌ನ ಸ್ಥಳೀಯ, ನೇಪಾಳದ ಒಬ್ಬರು ಮತ್ತು ದೇಶದ ವಿವಿಧ ರಾಜ್ಯಗಳ ಪ್ರವಾಸಿಗರು ಸೇರಿದಂತೆ 26 ಜನರು ಪ್ರಾಣ ಕಳೆದುಕೊಂಡಿದ್ದರು.







ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಬ್ಲಾಕ್‌ನಲ್ಲಿರುವ ಗುರಿ ಗ್ರಾಮದ ನಿವಾಸಿ ಆದಿಲ್ ಗುರಿ ಎಂಬಾತನೂ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕೆ ಇದೆ. ಆತನನ್ನು ಮೋಸ್ಟ್ ವಾಂಟೆಡ್ ಎಂದು ಗುರುತಿಸಲಾಗಿದ್ದು, ಆತನ ಬಗ್ಗೆ ನಿರ್ದಿಷ್ಟ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಅನಂತನಾಗ್ ಪೊಲೀಸರು ಘೋಷಿಸಿದ್ದಾರೆ. ಈ ದಾಳಿ ಹಿನ್ನೆಲೆಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಸಹ ಮೋಸ್ಟ್ ವಾಂಟೆಡ್ ಎಂದು ಘೋಷಿಸಲಾಗಿದೆ.





ಆದಿಲ್ 2018ರಲ್ಲಿ ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದ. ಅಲ್ಲಿಂದ ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳುವ ಮುನ್ನ ಭಯೋತ್ಪಾದನಾ ತರಬೇತಿ ಪಡೆದಿದ್ದಾನೆ ಎಂದು ವರದಿಯಾಗಿದೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ