Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರು ಎಲ್‌ಇಟಿ ಉಗ್ರರ ಮನೆಗಳು ನೆಲಸಮ


ಶ್ರೀನಗರ (ಜಮ್ಮು ಕಾಶ್ಮೀರ): ಪಹಲ್ಗಾಮ್ ದಾಳಿಯಲ್ಲಿ ಸ್ಥಳೀಯ ಕುದುರೆ ಸವಾರ ಸೇರಿದಂತೆ 26 ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ ಬಳಿಕ ಮಹತ್ವದ ಬೆಳವಣಿಗೆಯಲ್ಲಿ, ದಕ್ಷಿಣ ಕಾಶ್ಮೀರದ ಟ್ರಾಲ್ ಮತ್ತು ಬಿಜ್‌ಬೆರಾ ಪ್ರದೇಶದಲ್ಲಿನ ಇಬ್ಬರು ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರ ಮನೆಗಳನ್ನು ಅಧಿಕಾರಿಗಳು ಶುಕ್ರವಾರ ನೆಲಸಮ ಮಾಡಿದ್ದಾರೆ.


ಬೈಸರನ್ ಪಹಲ್ಗಾಮ್ ದಾಳಿಯಲ್ಲಿ ಪ್ರಮುಖ ಪಾತ್ರವಿರುವ ಆರೋಪದ ಹಿನ್ನೆಲೆಯಲ್ಲಿ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನಲ್ಲಿರುವ ಆಸಿಫ್ ಶೇಖ್ ಮತ್ತು ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆರಾದಲ್ಲಿರುವ ಆದಿಲ್ ಥೋಕರ್ ಅವರ ಮನೆಗಳನ್ನು ಸ್ಫೋಟಿಸಿ, ನೆಲಸಮ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


ಮಂಗಳವಾರ ಪಹಲ್ಗಾಮ್‌ನ ಬೈಸರನ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಹಲ್ಗಾಮ್‌ನ ಸ್ಥಳೀಯ, ನೇಪಾಳದ ಒಬ್ಬರು ಮತ್ತು ದೇಶದ ವಿವಿಧ ರಾಜ್ಯಗಳ ಪ್ರವಾಸಿಗರು ಸೇರಿದಂತೆ 26 ಜನರು ಪ್ರಾಣ ಕಳೆದುಕೊಂಡಿದ್ದರು.

Advertisement






ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಬ್ಲಾಕ್‌ನಲ್ಲಿರುವ ಗುರಿ ಗ್ರಾಮದ ನಿವಾಸಿ ಆದಿಲ್ ಗುರಿ ಎಂಬಾತನೂ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕೆ ಇದೆ. ಆತನನ್ನು ಮೋಸ್ಟ್ ವಾಂಟೆಡ್ ಎಂದು ಗುರುತಿಸಲಾಗಿದ್ದು, ಆತನ ಬಗ್ಗೆ ನಿರ್ದಿಷ್ಟ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಅನಂತನಾಗ್ ಪೊಲೀಸರು ಘೋಷಿಸಿದ್ದಾರೆ. ಈ ದಾಳಿ ಹಿನ್ನೆಲೆಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಸಹ ಮೋಸ್ಟ್ ವಾಂಟೆಡ್ ಎಂದು ಘೋಷಿಸಲಾಗಿದೆ.





ಆದಿಲ್ 2018ರಲ್ಲಿ ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದ. ಅಲ್ಲಿಂದ ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳುವ ಮುನ್ನ ಭಯೋತ್ಪಾದನಾ ತರಬೇತಿ ಪಡೆದಿದ್ದಾನೆ ಎಂದು ವರದಿಯಾಗಿದೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*