Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಪ್ಪಗಲ್‌ನ ಡಾ. ಸಿ. ಮುನಿಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ಪದವಿ



ಬಳ್ಳಾರಿ:ಬಳ್ಳಾರಿ 30.ತಾಲೂಕಿನ ಕಪ್ಪಗಲ್ ಗ್ರಾಮದ ಕನ್ನಡ ರಕ್ಷಣಾ ಯುವ ವೇದಿಕ ಜಿಲ್ಲಾಧ್ಯಕ್ಷರಾದ ಡಾ. ಸಿ. ಮುನಿಸ್ವಾಮಿ ಕಪ್ಪಗಲ್ ಅವರಿಗೆ ಸಮಾಜ ಸೇವೆಯ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.


ಈ ತಿಂಗಳ 27ರಂದು ದೆಹಲಿಯ ರಾಷ್ಟ್ರೀಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಜಸ್ಥಾನ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ, ವಿಶ್ವವಿದ್ಯಾಲಯದ ಉಪಕುಲಪತಿ ಸೇರಿದಂತೆ ಅನೇಕ ಗಣ್ಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್ ಪ್ರದಾನಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮುನಿಸ್ವಾಮಿ, ಇದು ತಮ್ಮ ಜೀವನದ ಅತ್ಯಂತ ಸಂತೋಷದ ದಿನವಾಗಿದ್ದು, ಹಲವು ವರ್ಷಗಳಿಂದ ನಿರಂತರವಾಗಿ ಮಾಡುತ್ತಿರುವ ಸಮಾಜ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿರುವುದಕ್ಕೆ ಅಪಾರ ಸಂತೋಷವಾಗಿದೆ ಎಂದರು.


2007ರಿಂದ ಪ್ರತಿವರ್ಷ ಉಚಿತ ಸಾಮೂಹಿಕ ವಿವಾಹಗಳನ್ನು ಆಯೋಜಿಸುತ್ತಿದ್ದು, 2023ರಿಂದ ವರ್ಷಕ್ಕೆ ಎರಡು ಬಾರಿ—ಆರು ತಿಂಗಳಿಗೊಮ್ಮೆ—ಉಚಿತ ವಿವಾಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.


 ಇದುವರೆಗೂ ಸುಮಾರು 1600 ಜೋಡಿಗಳಿಗೆ ಉಚಿತ ವಿವಾಹಗಳನ್ನು ನೆರವೇರಿಸಲಾಗಿದೆ.


ನನ್ನ ಉಸಿರು ಇರುವವರೆಗೂ ಈ ಸೇವೆಯನ್ನು ಮುಂದುವರಿಸುತ್ತೇನೆ ಎಂದು ಅವರು ಹೇಳಿದರು.


ಕನ್ನಡ ರಕ್ಷಣಾ ಯುವ ವೇದಿಕ ಮೂಲಕ ಅರ್ಜಿಗಳನ್ನು ಸಲ್ಲಿಸಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರಸ್ತೆ ದುರಸ್ತಿಗಾಗಿ ನಿರಂತರ ಹೋರಾಟ ನಡೆಸಿರುವುದಾಗಿ ತಿಳಿಸಿದರು.


 ಕಳೆದ 20 ವರ್ಷಗಳಿಂದ ಉಚಿತ ಆರೋಗ್ಯ ಶಿಬಿರಗಳು, ರಕ್ತದಾನ ಶಿಬಿರಗಳು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಣೆ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದರು.


ಈ ಸೇವೆಗಳನ್ನು ಗುರುತಿಸಿ, ಬೆಂಗಳೂರು ಕರ್ನಾಟಕ ಪತ್ರಿಕಾ ಸಂಘದಿಂದ ಸೇವಾ ರತ್ನ ಪ್ರಶಸ್ತಿ, Z ಟಿವಿ ಕನ್ನಡ ನ್ಯೂಸ್‌ನಿಂದ ಕರ್ನಾಟಕ ಐಎನ್ಆರ್‌ಪಿ ಪ್ರಶಸ್ತಿ, ತೆಲಂಗಾಣದಲ್ಲಿ ನಂದಿ ಪ್ರಶಸ್ತಿ, ಮುಂಬೈನಲ್ಲಿ ದಾದಾಸಾಹೇಬ್ ಪಾಲಿಕೆ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳನ್ನು ಅವರು ಪಡೆದಿದ್ದಾರೆ.


ಇತ್ತೀಚೆಗೆ ದೆಹಲಿಯಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ದೊರೆತಿರುವುದು ವಿಶೇಷವಾಗಿದೆ.


ಡಾ. ಮುನಿಸ್ವಾಮಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ರಾಷ್ಟ್ರೀಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ