Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾರರ್ ಫ್ಯಾಂಟಸಿ ಚಿತ್ರ  ದಿ ರಾಜಾ ಸಾಬ್' ಅಬ್ಬರ 


     ಪ್ಯಾನ್-ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ 'ದಿ ರಾಜಾ ಸಾಬ್' ತಂಡದಿಂದ ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುನ್ನುಡಿ ಬರೆಯಲಾಗಿದೆ.

     ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ನಡೆದ ಪ್ರೀ-ರಿಲೀಸ್ ಸಮಾರಂಭದಲ್ಲಿ ಚಿತ್ರತಂಡವು ಅಭಿಮಾನಿಗಳ ಸಮ್ಮುಖದಲ್ಲಿ ಸಿನಿಮಾ ಬಗ್ಗೆ ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದೆ.

     ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ರೆಬೆಲ್ ಸ್ಟಾರ್ ಪ್ರಭಾಸ್ ಮಾತನಾಡಿ, "ಅಭಿಮಾನಿಗಳಿಗೆ ಸಂಪೂರ್ಣ ಮನರಂಜನೆ ನೀಡುವ ಉದ್ದೇಶದಿಂದ ಈ ಸಿನಿಮಾ ಮಾಡಿದ್ದೇವೆ. ನಿರ್ದೇಶಕ ಮಾರುತಿ ಅವರ ಬರವಣಿಗೆಗೆ ನಾನು ಕ್ಲೈಮ್ಯಾಕ್ಸ್ ನೋಡಿದ ನಂತರ ಅಭಿಮಾನಿಯಾದೆ. ಈ ಸಂಕ್ರಾಂತಿಗೆ ಬಿಡುಗಡೆಯಾಗುತ್ತಿರುವ ಎಲ್ಲಾ ಸಿನಿಮಾಗಳು ಯಶಸ್ವಿಯಾಗಲಿ, ಅದರ ಜೊತೆಗೆ 'ದಿ ರಾಜಾ ಸಾಬ್' ಕೂಡ ಬ್ಲಾಕ್‌ಬಸ್ಟರ್ ಆಗಲಿ" ಎಂದು ಆಶಿಸಿದರು. ಅಲ್ಲದೆ, ಕಳೆದ ಡಿ. 29 ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

     "ನಾನು 11 ಸಿನಿಮಾಗಳನ್ನು ಮಾಡಿದ್ದೇನೆ, ಆದರೆ ಪ್ರಭಾಸ್ ಅವರು ನನಗೆ 'ರೆಬೆಲ್ ಯೂನಿವರ್ಸಿಟಿ'ಯಲ್ಲಿ ದೊಡ್ಡ ಮಟ್ಟದ ಅವಕಾಶ ನೀಡಿದ್ದಾರೆ. ಈ ಸಿನಿಮಾದ ಎಮೋಷನಲ್ ದೃಶ್ಯಗಳನ್ನು ನೋಡುವಾಗ ನನ್ನ ಕಣ್ಣಲ್ಲೇ ನೀರು ಬಂದಿದೆ. ಒಂದು ವೇಳೆ ಈ ಸಿನಿಮಾ ನಿಮ್ಮನ್ನು ನಿರಾಸೆಗೊಳಿಸಿದರೆ ನನ್ನ ಮನೆ ವಿಳಾಸ ಕೊಡುತ್ತೇನೆ, ಅಲ್ಲಿಗೆ ಬಂದು ಕೇಳಿ" ಎಂದು ನಿರ್ದೇಶಕ ಮಾರುತಿ ಸವಾಲಿನೊಂದಿಗೆ ಭರವಸೆ ನೀಡಿದರು.

ಜೊತೆಗೆ "ಇದು ಕೇವಲ ಸಿನಿಮಾ ಅಲ್ಲ, ಒಂದು ದೊಡ್ಡ ಮಟ್ಟದ ಹಾರರ್-ಫ್ಯಾಂಟಸಿ ಪ್ರಯೋಗ. ಚಿತ್ರದ ಪ್ರತಿಯೊಂದು ದೃಶ್ಯವೂ ಅಭಿಮಾನಿಗಳಿಗೆ ಹಬ್ಬದಂತಿರಲಿದೆ" ಎಂದಿದ್ದಾರೆ.

     ನಿರ್ಮಾಪಕ ಟಿ.ಜಿ. ವಿಶ್ವ ಪ್ರಸಾದ್ "ಇದು ಪೀಪಲ್ ಮೀಡಿಯಾ ಫ್ಯಾಕ್ಟರಿಯ ಅತಿ ದೊಡ್ಡ ಸಿನಿಮಾ. ಹಾರರ್-ಫ್ಯಾಂಟಸಿ ಜಾನರ್‌ನಲ್ಲಿ ಜಾಗತಿಕ ಮಟ್ಟದಲ್ಲಿ ಇದೊಂದು ಮಾದರಿ ಚಿತ್ರವಾಗಲಿದೆ" ಎಂದರು.

     ನಟ ಸಪ್ತಗಿರಿ ಮಾತನಾಡಿ, "ಸಲಾರ್ ಸಿನಿಮಾ 2000 ಕೋಟಿ ಗಳಿಸುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಈಗ 'ದಿ ರಾಜಾ ಸಾಬ್' ಟ್ರೇಲರ್ ನೋಡಿದ್ದೇನೆ, ಇದು ಕೂಡ ಖಂಡಿತವಾಗಿ 2000 ಕೋಟಿ ಕ್ಲಬ್ ಸೇರಲಿದೆ. ಪ್ರಭಾಸ್ ಅಣ್ಣ ಮತ್ತೆ ಹೂವು ಹಿಡಿದು ವಿಂಟೇಜ್ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಹಬ್ಬ" ಎಂದರು.

     ನಾಯಕಿ ಮಾಳವಿಕಾ ಮೋಹನನ್  "ಕೇವಲ ಹಾಡು-ನೃತ್ಯವಷ್ಟೇ ಅಲ್ಲದೆ, ನನಗೆ ಆಕ್ಷನ್ ಮತ್ತು ಕಾಮಿಡಿ ಮಾಡುವ ಅವಕಾಶವನ್ನೂ ಮಾರುತಿ ಅವರು ನೀಡಿದ್ದಾರೆ" ಎಂದು ಸಂತಸ ಹಂಚಿಕೊಂಡರು. ಪ್ರಭಾಸ್ ಜೊತೆ ನಟಿಸುವುದು ಒಂದು ಕನಸು ಎಂದು ನಿಧಿ ಬಣ್ಣಿಸಿದರೆ, ಪ್ರಭಾಸ್ ಅವರ ನೈಜ ಗುಣಗಳನ್ನು ಈ ಸಿನಿಮಾದಲ್ಲಿ ನೋಡಬಹುದು ಎಂದು ರಿದ್ಧಿ ಕುಮಾರ್ ತಿಳಿಸಿದರು. ಹಿರಿಯ ನಟಿ ಜರೀನಾ ವಹಾಬ್ ಅವರು ಪ್ರಭಾಸ್  ಅಜ್ಜಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಜಯ್ ದತ್ ಮತ್ತು ಬೋಮನ್ ಇರಾನಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಥಮನ್ ಸಂಗೀತ ಮತ್ತು ಕಾರ್ತಿಕ್ ಪಳನಿ  ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರ ಜನವರಿ 9 ರಂದು ವಿಶ್ವದಾದ್ಯಂತ ತೆರೆಕಾಣಲಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ