Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ್ಯಪಲ್​ನ ಇಕೋಸಿಸ್ಟಂನಿಂದ  ವಸತಿ ಯೋಜನೆ: ಭಾರತದಲ್ಲೂ ಉದ್ಯೋಗಿಗಳಿಗೆ ಮನೆ

ನವದೆಹಲಿ, ಏಪ್ರಿಲ್ 8: ಭಾರತದಲ್ಲಿ ಆ್ಯಪಲ್​ನ ಇಕೋಸಿಸ್ಟಂನಿಂದ  ವಸತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ ಆ್ಯಪಲ್ ಉತ್ಪನ್ನಗಳನ್ನು ತಯಾರಿಸಲಾಗುವ ಫ್ಯಾಕ್ಟರಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಮನೆಗಳನ್ನು ಕಟ್ಟಿ ಕೊಡಲು  ಯೋಜಿಸಲಾಗಿದೆ.

ಕಳೆದ ಎರಡೂವರೆ ವರ್ಷದಲ್ಲಿ ಆ್ಯಪಲ್​ನಿಂದ ಭಾರತದಲ್ಲಿ ಒಂದೂವರೆ ಲಕ್ಷ ನೇರ ಉದ್ಯೋಗಿಗಳು ಸೃಷ್ಟಿಯಾಗಿವೆ. ಈ ಪೈಕಿ 78,000ಕ್ಕೂ ಹೆಚ್ಚು ಮನೆಗಳನ್ನು ಕಟ್ಟಿಕೊಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಇದರಲ್ಲಿ ತಮಿಳುನಾಡಿನಲ್ಲೇ 58,000 ರೆಸಿಡೆನ್ಷಿಯಲ್ ಯೂನಿಟ್​ಗಳಿರಲಿವೆ ಎಂಬ ಮಾಹಿತಿ ತಿಳಿದುಬಂದಿದೆ. ಆ್ಯಪಲ್ ಸಂಸ್ಥೆ ಚೀನಾ ಮತ್ತು ವಿಯೆಟ್ನಾಂನಲ್ಲೂ ಇದೇ ರೀತಿ ಉದ್ಯೋಗಿಗಳಿಗೆ ವಸತಿ ವ್ಯವಸ್ಥೆಯ ನೀತಿ ಅನುಸರಿಸುತ್ತಿದೆ.

ಭಾರತದಲ್ಲಿ ಆ್ಯಪಲ್ ಕಂಪನಿ ತನ್ನ ಉತ್ಪನ್ನಗಳನ್ನು ನೇರವಾಗಿ ತಯಾರಿಸುವುದಿಲ್ಲ. ಅದಕ್ಕಾಗಿ ಗುತ್ತಿಗೆ ಕಂಪನಿಗಳು, ಸರಬರಾಜುದಾರರಿದ್ದಾರೆ. ಫಾಕ್ಸ್​ಕಾನ್, ಟಾಟಾ, ಪೆಗಾಟ್ರಾನ್ ಕಂಪನಿಗಳು ಐಫೋನ್​ಗಳನ್ನು ಆ್ಯಪಲ್​ಗಾಗಿ ತಯಾರಿಸಿಕೊಡುವ ಗುತ್ತಿಗೆ ಪಡೆದಿವೆ. ಫಿನ್​ಲ್ಯಾಂಡ್ ಮೂಲದ ಸಾಲ್​ಕಾಂಪ್ ಎಂಬ ಕಂಪನಿ ಐಫೋನ್​ನ ಚಾರ್ಜರ್ ಅನ್ನು ಭಾರತದಲ್ಲಿ ತಯಾರಿಸುತ್ತದೆ. ಬೇರೆ ಬೇರೆ ಬಿಡಿಭಾಗಗಳನ್ನು ತಯಾರಿಸಿಕೊಡುವ ಕಂಪನಿಗಳೂ ಇವೆ. ಈ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ವಸತಿ ಭಾಗ್ಯ ಸಿಗಲಿದೆ.

ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮನೆಗಳ ನಿರ್ಮಾಣವಾಗಲಿದೆ. ತಮಿಳುನಾಡಿನಲ್ಲಿ ಕಟ್ಟಲಾಗುವ 58,000 ಮನೆಗಳ ನಿರ್ಮಾಣ ಜವಾಬ್ದಾರಿಯನ್ನು ಸಿಪ್​ಕಾಟ್ ಸಂಸ್ಥೆ ವಹಿಸಿಕೊಂಡಿದೆ. ರಿಯಲ್ ಎಸ್ಟೇಟ್ ಕಂಪನಿ ಎಸ್​ಪಿಆರ್ ಇಂಡಿಯಾ ಮತ್ತು ಟಾಟಾ ಗ್ರೂಪ್ ಈ ಆ್ಯಪಲ್ ಮನೆಗಳ ನಿರ್ಮಾಣದಲ್ಲಿ ಕೈಜೋಡಿಸಲಿವೆ. ಇದಕ್ಕೆ ಬೇಕಾಗುವ ಫಂಡಿಂಗ್ ಅನ್ನು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಉದ್ಯಮಿಗಳು ಭರಿಸಲಿದ್ದಾರೆ. ವರದಿ ಪ್ರಕಾರ ಶೇ. 10-15ರಷ್ಟು ಫಂಡಿಂಗ್ ಕೇಂದ್ರದಿಂದ ಬರಲಿದೆ.

ಈ ಹಣಕಾಸು ವರ್ಷ ಮುಗಿಯುವುದರೊಳಗೆ, ಅಂದರೆ 2025ರ ಮಾರ್ಚ್ 31ರೊಳಗೆ ಸಿಪ್ಕಾಟ್ ಈ ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸುವ ಸಾಧ್ಯತೆ ಇದೆ. ‘ಉದ್ಯೋಗಿಗಳಿಗೆ ವಸತಿ ನಿರ್ಮಿಸಿಕೊಡುವ ಯೋಜನೆಯು ವಲಸಿಗ ಉದ್ಯೋಗಿಗಳಿಗೆ, ಅದರಲ್ಲೂ ಮಹಿಳಾ ಉದ್ಯೋಗಿಗಳಿಗೆ ಭದ್ರತೆಯಾಗಿರುತ್ತದೆ,’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಕನಾಮಿ ಟೈಮ್ಸ್ ವರದಿ ಮಾಡಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ