Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವ-ಆನೆ ಸಂಘರ್ಷವು ಒಂದು ಸಂಕೀರ್ಣ ಸಮಸ್ಯೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: "ಮಾನವ-ಆನೆ ಸಂಘರ್ಷ ಕೇವಲ ಕರ್ನಾಟಕ ಅಥವಾ ಭಾರತದ ಯಾವುದೋ ಒಂದು ರಾಜ್ಯದ ಸಮಸ್ಯೆಯಲ್ಲ. ಬದಲಾಗಿ ಜಾಗತಿಕ ಸಮಸ್ಯೆಯಾಗಿದೆ. ಮಾನವ-ಆನೆ ಸಂಘರ್ಷವು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಒಂದು ಸಂಕೀರ್ಣ ಸಮಸ್ಯೆಯಾಗಿದೆ" ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.


ಅರಣ್ಯ ಇಲಾಖೆಯು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ಈ ಸಮ್ಮೇಳನದ ವಿಷಯವೇ ಒಂದು ಮಹತ್ವದ ಸವಾಲನ್ನು ಪ್ರಚುರಪಡಿಸುತ್ತದೆ" ಎಂದು ಅಭಿಪ್ರಾಯಪಟ್ಟರು.


"ಅಮೂಲ್ಯವಾದ ಜೀವ ಹಾನಿ, ಬೆಳೆ ಹಾನಿಗೆ ಕಾರಣವಾಗುತ್ತಿರುವ ಈ ಸಮಸ್ಯೆಗೆ ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮ ಸಂಘಟಿತ ಮತ್ತು ಸಹಯೋಗದ ಪ್ರಯತ್ನಗಳು ಅಗತ್ಯ ಮತ್ತು ಅನಿವಾರ್ಯ ಎಂದು ನಾನು ಭಾವಿಸುತ್ತೇನೆ. ಕರ್ನಾಟಕ ರಾಜ್ಯ ವೈವಿಧ್ಯಮಯ ಜೀವವೈವಿಧ್ಯ, ಸಸ್ಯ ಸಂಪತ್ತು, ಪ್ರಾಣಿ ಸಂಪತ್ತಿನಿಂದ ಕೂಡಿದೆ. ವಿಶಾಲವಾದ ದಟ್ಟ ಅಡವಿಗಳು, ಪ್ರಾಣಿ ಸಂಕುಲ, ಸಸ್ಯ ಸಂಕುಲ, ಕೀಟ ಸಂಕುಲ ಮತ್ತು ಪಕ್ಷಿ ಸಂಕುಲಕ್ಕೆ ನೆಲೆಯಾಗಿದೆ. ಕರ್ನಾಟಕದಲ್ಲಿ ಸುಮಾರು 43,382 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಅಂದರೆ ನಮ್ಮ ಭೌಗೋಳಿಕ ಭೂಭಾಗದ ಶೇ.22ರಷ್ಟು ಹಸಿರು ಹೊದಿಕೆ ಇದೆ" ಎಂದು ಮಾಹಿತಿ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ