LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಾನವ-ಆನೆ ಸಂಘರ್ಷವು ಒಂದು ಸಂಕೀರ್ಣ ಸಮಸ್ಯೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: "ಮಾನವ-ಆನೆ ಸಂಘರ್ಷ ಕೇವಲ ಕರ್ನಾಟಕ ಅಥವಾ ಭಾರತದ ಯಾವುದೋ ಒಂದು ರಾಜ್ಯದ ಸಮಸ್ಯೆಯಲ್ಲ. ಬದಲಾಗಿ ಜಾಗತಿಕ ಸಮಸ್ಯೆಯಾಗಿದೆ. ಮಾನವ-ಆನೆ ಸಂಘರ್ಷವು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಒಂದು ಸಂಕೀರ್ಣ ಸಮಸ್ಯೆಯಾಗಿದೆ" ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.


ಅರಣ್ಯ ಇಲಾಖೆಯು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ಈ ಸಮ್ಮೇಳನದ ವಿಷಯವೇ ಒಂದು ಮಹತ್ವದ ಸವಾಲನ್ನು ಪ್ರಚುರಪಡಿಸುತ್ತದೆ" ಎಂದು ಅಭಿಪ್ರಾಯಪಟ್ಟರು.


"ಅಮೂಲ್ಯವಾದ ಜೀವ ಹಾನಿ, ಬೆಳೆ ಹಾನಿಗೆ ಕಾರಣವಾಗುತ್ತಿರುವ ಈ ಸಮಸ್ಯೆಗೆ ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮ ಸಂಘಟಿತ ಮತ್ತು ಸಹಯೋಗದ ಪ್ರಯತ್ನಗಳು ಅಗತ್ಯ ಮತ್ತು ಅನಿವಾರ್ಯ ಎಂದು ನಾನು ಭಾವಿಸುತ್ತೇನೆ. ಕರ್ನಾಟಕ ರಾಜ್ಯ ವೈವಿಧ್ಯಮಯ ಜೀವವೈವಿಧ್ಯ, ಸಸ್ಯ ಸಂಪತ್ತು, ಪ್ರಾಣಿ ಸಂಪತ್ತಿನಿಂದ ಕೂಡಿದೆ. ವಿಶಾಲವಾದ ದಟ್ಟ ಅಡವಿಗಳು, ಪ್ರಾಣಿ ಸಂಕುಲ, ಸಸ್ಯ ಸಂಕುಲ, ಕೀಟ ಸಂಕುಲ ಮತ್ತು ಪಕ್ಷಿ ಸಂಕುಲಕ್ಕೆ ನೆಲೆಯಾಗಿದೆ. ಕರ್ನಾಟಕದಲ್ಲಿ ಸುಮಾರು 43,382 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಅಂದರೆ ನಮ್ಮ ಭೌಗೋಳಿಕ ಭೂಭಾಗದ ಶೇ.22ರಷ್ಟು ಹಸಿರು ಹೊದಿಕೆ ಇದೆ" ಎಂದು ಮಾಹಿತಿ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್