Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವ-ಆನೆ ಸಂಘರ್ಷವು ಒಂದು ಸಂಕೀರ್ಣ ಸಮಸ್ಯೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: "ಮಾನವ-ಆನೆ ಸಂಘರ್ಷ ಕೇವಲ ಕರ್ನಾಟಕ ಅಥವಾ ಭಾರತದ ಯಾವುದೋ ಒಂದು ರಾಜ್ಯದ ಸಮಸ್ಯೆಯಲ್ಲ. ಬದಲಾಗಿ ಜಾಗತಿಕ ಸಮಸ್ಯೆಯಾಗಿದೆ. ಮಾನವ-ಆನೆ ಸಂಘರ್ಷವು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಒಂದು ಸಂಕೀರ್ಣ ಸಮಸ್ಯೆಯಾಗಿದೆ" ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.


ಅರಣ್ಯ ಇಲಾಖೆಯು ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. ಈ ಸಮ್ಮೇಳನದ ವಿಷಯವೇ ಒಂದು ಮಹತ್ವದ ಸವಾಲನ್ನು ಪ್ರಚುರಪಡಿಸುತ್ತದೆ" ಎಂದು ಅಭಿಪ್ರಾಯಪಟ್ಟರು.


"ಅಮೂಲ್ಯವಾದ ಜೀವ ಹಾನಿ, ಬೆಳೆ ಹಾನಿಗೆ ಕಾರಣವಾಗುತ್ತಿರುವ ಈ ಸಮಸ್ಯೆಗೆ ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮ ಸಂಘಟಿತ ಮತ್ತು ಸಹಯೋಗದ ಪ್ರಯತ್ನಗಳು ಅಗತ್ಯ ಮತ್ತು ಅನಿವಾರ್ಯ ಎಂದು ನಾನು ಭಾವಿಸುತ್ತೇನೆ. ಕರ್ನಾಟಕ ರಾಜ್ಯ ವೈವಿಧ್ಯಮಯ ಜೀವವೈವಿಧ್ಯ, ಸಸ್ಯ ಸಂಪತ್ತು, ಪ್ರಾಣಿ ಸಂಪತ್ತಿನಿಂದ ಕೂಡಿದೆ. ವಿಶಾಲವಾದ ದಟ್ಟ ಅಡವಿಗಳು, ಪ್ರಾಣಿ ಸಂಕುಲ, ಸಸ್ಯ ಸಂಕುಲ, ಕೀಟ ಸಂಕುಲ ಮತ್ತು ಪಕ್ಷಿ ಸಂಕುಲಕ್ಕೆ ನೆಲೆಯಾಗಿದೆ. ಕರ್ನಾಟಕದಲ್ಲಿ ಸುಮಾರು 43,382 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಅಂದರೆ ನಮ್ಮ ಭೌಗೋಳಿಕ ಭೂಭಾಗದ ಶೇ.22ರಷ್ಟು ಹಸಿರು ಹೊದಿಕೆ ಇದೆ" ಎಂದು ಮಾಹಿತಿ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ