ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರ ಪೀಠವು, ಐಎಂ ಭಯೋತ್ಪಾದಕರು ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣಾ ಮೇಲ್ಮನವಿಯನ್ನು ವಜಾಗೊಳಿಸಿ, ಎನ್ಐಎ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ದೃಢಪಡಿಸಲಾಗಿದೆ ಎಂದು ಪೀಠ ಹೇಳಿದೆ.
ಇದಕ್ಕೂ ಮೊದಲು ಡಿಸೆಂಬರ್ 13, 2016 ರಂದು ಐಎಂ ಸಹ ಸಂಸ್ಥಾಪಕ ಮೊಹಮ್ಮದ್ ಅಹ್ಮದ್ ಸಿದ್ದಿಬಾಪಾಯಾಸ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರೆಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಮೊನ್ಜಾ ಹದ್ದಿ ಸೇರಿದಂತೆ ಐವರು ಸದಸ್ಯರನ್ನು ಎನ್ಐಎ ನ್ಯಾಯಾಲಯ ದೋಷಿ ಎಂದು ಘೋಷಿಸಿತ್ತು.