Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಮತ್ತು ಗುಂಡ 2  ಶಿವನ ಹಾಡು ಬಿಡುಗಡೆ

  'ನಾನು ಮತ್ತು ಗುಂಡ 2' ಚಿತ್ರಕ್ಕಂ ಡಾ.ವಿ.ನಾಗೇಂದ್ರಪ್ರಸಾದ್ ಶಿವನ ಮೇಲೆ ರಚಿಸಿರುವ ಹಾಗೂ ವಿಜಯಪ್ರಕಾಶ್ ದನಿಯಾಗಿರುವ  'ಓಂ ಶಿವಾಯ, ನಮೋ ಶಿವಾಯ' ಹಾಡಿನ ಬಿಡುಗಡೆಯಾಗಿದೆ. ಸೆ. 5ರಂದು ಈ ಚಿತ್ರದ  ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ.


     ಸಮಾರಂಭದಲ್ಲಿ ಸಾಹಿತಿ ನಾಗೇಂದ್ರ ಪ್ರಸಾದ್ ಮಾತನಾಡುತ್ತಾ "ರಘುಹಾಸನ್ ಈ ಸಾಂಗ್ ಬಗ್ಗೆ ಹೇಳಿದಾಗ ತುಂಬಾ ವಿಷಯಗಳು ಇದರಲ್ಲಿವೆ ಎನಿಸಿತು, ಕಥೆ ಹೇಳಿದ ಹಾಗಿರಬಾರದು, ಆದರೆ ಲೈನ್ಸ್ ಕಥೆ ಹೇಳುವಂತಿರಬೇಕು, ಮನಸಿಗೆ ಇಳಿಯುವಂಥ ಕಂಟೆಂಟ್ ಈ ಹಾಡಲ್ಲಿದೆ, ಇದು ಪಕ್ಕಾ ಚಿತ್ರಗೀತೆ, ಸಿನಿಮಾದಲ್ಲಿ ನೋಡಿದಾಗ ತುಂಬಾ ಇಂಪ್ಯಾಕ್ಟ್ ಆಗುತ್ತೆ ಟ್ರೇಲರ್‌ನಲ್ಲಿ ಎಲ್ಲಾ ಎಮೋಷನ್ ಹೇಳುವ ಪ್ರಯತ್ನ ಮಾಡಿದ್ದಾರೆ" ಎಂದು ಹೇಳಿದರು.

     ನಿರ್ದೇಶಕ ರಘುಹಾಸನ್ "ನಮ್ಮ ಚಿತ್ರ 2022ರಲ್ಲಿ  ಪ್ರಾರಂಭವಾಗಿತ್ತು, ಇದೀಗ ಬಿಡುಗಡೆಯಾಗುತ್ತಿದೆ, ಹೊಡಿಬಡಿ ಕಥೆಗಳನ್ನು ಬಿಟ್ಟು ಭಾವನಾತ್ಮಕವಾಗಿ ಏನಾದರೂ ಮಾಡಬೇಕೆಂದಾಗ ಹುಟ್ಟಿದ್ದೇ ಗುಂಡನ ಕಥೆ, ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ ಸೂಚಿಸದೆ 'ಯು/ಎ' ಕೊಟ್ಟಿದೆ, 'ನಾನು ಮತ್ತು ಗುಂಡ'ದ ಶಂಕರ ನಿಧನನಾದ ಮೇಲೆ ಆತನ ಮಗನಿಂದ ಭಾಗ 2ರಲ್ಲಿ ಕಥೆ ಕಂಟಿನ್ಯೂ ಆಗುತ್ತದೆ. ರಾಕೇಶ್ ಅಡಿಗ ಶಂಕರನ ಮಗನಾಗಿ ನಟಿಸಿದ್ದು, ಆತನಿಗೆ ನಾಯಿಯೇ ಪ್ರಪಂಚ. ಸೋಷಿಯಲ್ ಕನ್‌ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಈ ಚಿತ್ರದಲ್ಲಿದೆ"

ಎಂದು ತಿಳಿಸಿದರು. ರಘುಹಾಸನ್ ಚಿತ್ರದ ನಿರ್ಮಾಣದ ಜವಾಬ್ದಾರಿ ಸಹ ಹೊತ್ತಿದ್ದಾರೆ.

     ನಾಯಕ ರಾಕೇಶ್ ಅಡಿಗ, ನಾಯಕಿ ರಚನಾ ಇಂದರ್, ಛಾಯಾಗ್ರಾಹಕ ತನ್ವಿಕ್, ಬಾಲನಟ ಜೀವನ್ ಚಿತ್ರದ ವಿಶೇಷತೆಗಳ ಕುರಿತು ಮಾತನಾಡಿದರು.


ಪಟ್ನಾಯಕ್ ಸಂಗೀತ ಸಂಯೋಜನೆ, ರುತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತವಿದ್ದು, ಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ.


   ಈ ಚಿತ್ರದಲ್ಲಿ ಡಾಗ್ ಸಿಂಬನ ಮಗ ನಟಿಸಿದ್ದಾನೆ. ಸಿಂಬ ನಾಲ್ಕು ದಿನವಷ್ಟೇ  ಶೂಟಿಂಗ್‌ನಲ್ಲಿ ಭಾವಹಿಸಿ ಮೃತನಾಗಿದ್ದ. ನಂತರ ಅವನ ಮಗ ಸಿಂಬ ನಟಿಸಿದ್ದಾನೆ.   ಅಲ್ಲದೆ  ಬಂಟಿ ಎಂಬ ನಾಯಿಯೂ   ನಟಿಸಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ