Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2028ರ ಚುನಾವಣೆಗೆ ಪಕ್ಷವನ್ನು ನಾನೇ ಮುನ್ನಡೆಸುತ್ತೇನೆ: ಡಿಕೆ ಶಿವಕುಮಾರ್‌




ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಚೆಕ್ ಮೆಟ್ ಕೊಟ್ಟಿದ್ದಾರೆ. 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ಇನ್ನು 8-10 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳುವ ಮೂಲಕ ಪಕ್ಷದೊಳಗಿನ ಸ್ನೇಹಿತರು ಮತ್ತು ಶತ್ರುಗಳಿಗೆ ಸಂದೇಶ ರವಾನಿಸಿದ್ದಾರೆ.

ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವರು ಪ್ರಯತ್ನಿಸುತ್ತಿರುವ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.

ಇತ್ತೀಚಿಗೆ ನಡೆದ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಡಿಕೆಶಿ, ಡಿಕೆಶಿ ಎಂದು ಘೋಷಣೆ ಕೂಗುತ್ತಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಗೆದ್ದು ನನ್ನ ನೇತೃತ್ವದಲ್ಲಿ ಪಕ್ಷ ಗೆದ್ದಾಗ ನೀವು ಇಂತಹ ಘೋಷಣೆಗಳನ್ನು ಕೂಗಬಹುದು. ನನ್ನ ಆರೋಗ್ಯ ಚೆನ್ನಾಗಿದ್ದು, ಇನ್ನು 8-10 ವರ್ಷ ರಾಜಕೀಯದಲ್ಲಿ ಇರುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ ಎಂದರು ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರೇ ಪಕ್ಷದೊಳಗೆ ರಣಕಹಳೆ ಮೊಳಗಿಸಬಲ್ಲ ಭವಿಷ್ಯದ ನಾಯಕ ಎಂದು ಬಿಂಬಿಸಿಕೊಳ್ಳಲು ಆರಂಭಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಇದು ಖಂಡಿತವಾಗಿಯೂ ಅವರ ಬೆಂಬಲಿಗರಲ್ಲಿ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ಬಯಸುವ ಎರಡನೇ ಸಾಲಿನ ನಾಯಕರಿಗೆ, ವಿಶೇಷವಾಗಿ ಮೊದಲ ಬಾರಿಯ ಶಾಸಕರಿಗೆ ಎಚ್ಚರಿಕೆಯ ಸಂದೇಶವನ್ನು ಕಳುಹಿಸುತ್ತದೆ. 62 ವರ್ಷದ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಂತೆ ಕ್ರಿಯಾಶೀಲರಾಗುವ ನಿರೀಕ್ಷೆಯಲ್ಲಿದ್ದಾರೆ ಎಂದು ಶಿವಕುಮಾರ್ ಪರ ಒಲವು ಹೊಂದಿರುವ ನಾಯಕರೊಬ್ಬರು ಹೇಳಿದರು.









Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ