LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಇಬ್ಬನಿ ತಬ್ಬಿದ ಇಳೆಯಲಿ  ರೆಟ್ರೋ ಸ್ಟೈಲ್ ನ ಹಾಡು



     ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ.

     ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ ಹಾಡನ್ನು  ಇತ್ತೀಚೆಗಷ್ಟೇ ಬಿಡುಗಡೆ ಮಾಡಿದೆ ಚಿತ್ರತಂಡ. ಈ ಹಿಂದೆ ಹರಿಬಿಟ್ಟಿದ್ದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ‘ಹೇಳು ಗೆಳತಿ’ ಹಾಡಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂಬುದು ತಂಡದ ಅನಿಸಿಕೆ.

     ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಚರಣ್‌ರಾಜ್ ಈ ಗೀತೆಗೆ ದನಿಗೂಡಿಸಿರುವುದು ವಿಶೇಷ.

      ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ಟ್ರೆಂಡ್ ಹುಟ್ಟು ಹಾಕಿರುವ ಈ ಗೀತೆಗೆ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ.

      ಕಿರಿಕ್ ಪಾರ್ಟಿ ಹಾಗೂ ಅವನ್ನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

       ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಚಿತ್ರಕ್ಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್